8:31 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ನೂತನ ಆಡಳಿತ ಮಂಡಳಿ ಆಯ್ಕೆ

15/04/2022, 23:13

ಮಂಗಳೂರು(reporterkarnataka.com): ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪ್ರಮುಖ ದೇವಾಲಯಗಳಲ್ಲೊಂದಾದ ರಥಬೀದಿಯಲ್ಲಿರುವ ಶ್ರೀ ವೆಂಕಟ್ರಮಣ ದೇವಸ್ಥಾನದ ಆಡಳಿತ ಮಂಡಳಿಯನ್ನು ನ್ಯಾಯಾಲಯದ ಆದೇಶಾನುಸಾರ ಪುನರ್ ರಚಿಸುವ ಸಲುವಾಗಿ ಚುನಾವಣೆ ಗುರವಾರ ನಡೆಯಿತು. 

ಸ್ಪರ್ಧಿಸಿದ ಒಟ್ಟು 11 ಅಭ್ಯರ್ಥಿಗಳಲ್ಲಿ ಅಡಿಗೆ ಬಾಲಕೃಷ್ಣ ಶೆಣೈ,  ಎಂ.ಕಿರಣ್ ಪೈ, ಎಂ.ಸತೀಶ್ ಪ್ರಭು, ಕೆ. ಗಣೇಶ್ ಕಾಮತ್ ಹಾಗೂ ಎಂ. ಜಗನ್ನಾಥ್ ಕಾಮತ್ ಮುಂದಿನ 5 ವರ್ಷಗಳ ಅವಧಿಗೆ ಶ್ರೀ ದೇವಳದ ಮುಕ್ತೇಸರರಾಗಿ ಆಯ್ಕೆಗೊಂಡರು. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ವಾಸಿಸುವ ಹದಿನೆಂಟು ವರ್ಷ ಮೇಲ್ಪಟ್ಟ ಸಮಾಜ ಬಾಂಧವರಿಗೆ ಮತದಾನದಲ್ಲಿ ಭಾಗವಹಿಸುವ  ಅವಕಾಶ ಕಲ್ಪಿಸಲಾಗಿತ್ತು. 

ಬೆಳಗ್ಗೆ 8.00ಕ್ಕೆ ಮತದಾನ ಪ್ರಾರಂಭವಾಗಿ ಸಂಜೆ 7.೦೦ಕ್ಕೆ ಮುಕ್ತಾಯಗೊಂಡಿತು. ಶ್ರೀ ದೇವಳದ ನಿಯೋಜಿತ ಚುನಾವಣಾ ಅಧಿಕಾರಿಯಾಗಿದ್ದ ನ್ಯಾಯವಾದಿ ನಾಗೇಶ್ ಕುಮಾರ್ ಮತ್ತು ಸಹಾಯಕ ಚುನಾವಣಾ ಅಧಿಕಾರಿಯಾಗಿದ್ದ ಪ್ರೇಮಾನಂದ ಕಿಣಿ ಹಾಗೂ ಸ್ವಯಂಸೇವಕರು ಚುನಾವಣಾ ಪ್ರಕ್ರಿಯೆಯಲ್ಲಿ ಸಹಕರಿಸಿದರು.  ಶುಕ್ರವಾರ ಬೆಳಿಗ್ಗೆ ಮಾಜಿ ಮೊಕ್ತೇಸರರಾದ ಸಿ . ಎಲ್ ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ ರವರು ತಮ್ಮ ಅಧಿಕಾರ ಹಾಗೂ ದೇವಳದ ಕೀಲಿಗಳನ್ನು ಶ್ರೀ ದೇವರ ಸಮ್ಮುಖದಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾಜಿ ಮೊಕ್ತೇಸರರಾದ ಎಂ . ಪದ್ಮನಾಭ ಪೈ  , ಕೊಚ್ಚಿಕಾರ್ ಜಯರಾಜ್ ಪೈ ಉಪಸ್ಥಿತರಿದ್ದರು . 

ಇತ್ತೀಚಿನ ಸುದ್ದಿ

ಜಾಹೀರಾತು