6:25 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ನೂತನ ಆಡಳಿತ ಮಂಡಳಿ ಆಯ್ಕೆ

15/04/2022, 23:13

ಮಂಗಳೂರು(reporterkarnataka.com): ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪ್ರಮುಖ ದೇವಾಲಯಗಳಲ್ಲೊಂದಾದ ರಥಬೀದಿಯಲ್ಲಿರುವ ಶ್ರೀ ವೆಂಕಟ್ರಮಣ ದೇವಸ್ಥಾನದ ಆಡಳಿತ ಮಂಡಳಿಯನ್ನು ನ್ಯಾಯಾಲಯದ ಆದೇಶಾನುಸಾರ ಪುನರ್ ರಚಿಸುವ ಸಲುವಾಗಿ ಚುನಾವಣೆ ಗುರವಾರ ನಡೆಯಿತು. 

ಸ್ಪರ್ಧಿಸಿದ ಒಟ್ಟು 11 ಅಭ್ಯರ್ಥಿಗಳಲ್ಲಿ ಅಡಿಗೆ ಬಾಲಕೃಷ್ಣ ಶೆಣೈ,  ಎಂ.ಕಿರಣ್ ಪೈ, ಎಂ.ಸತೀಶ್ ಪ್ರಭು, ಕೆ. ಗಣೇಶ್ ಕಾಮತ್ ಹಾಗೂ ಎಂ. ಜಗನ್ನಾಥ್ ಕಾಮತ್ ಮುಂದಿನ 5 ವರ್ಷಗಳ ಅವಧಿಗೆ ಶ್ರೀ ದೇವಳದ ಮುಕ್ತೇಸರರಾಗಿ ಆಯ್ಕೆಗೊಂಡರು. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ವಾಸಿಸುವ ಹದಿನೆಂಟು ವರ್ಷ ಮೇಲ್ಪಟ್ಟ ಸಮಾಜ ಬಾಂಧವರಿಗೆ ಮತದಾನದಲ್ಲಿ ಭಾಗವಹಿಸುವ  ಅವಕಾಶ ಕಲ್ಪಿಸಲಾಗಿತ್ತು. 

ಬೆಳಗ್ಗೆ 8.00ಕ್ಕೆ ಮತದಾನ ಪ್ರಾರಂಭವಾಗಿ ಸಂಜೆ 7.೦೦ಕ್ಕೆ ಮುಕ್ತಾಯಗೊಂಡಿತು. ಶ್ರೀ ದೇವಳದ ನಿಯೋಜಿತ ಚುನಾವಣಾ ಅಧಿಕಾರಿಯಾಗಿದ್ದ ನ್ಯಾಯವಾದಿ ನಾಗೇಶ್ ಕುಮಾರ್ ಮತ್ತು ಸಹಾಯಕ ಚುನಾವಣಾ ಅಧಿಕಾರಿಯಾಗಿದ್ದ ಪ್ರೇಮಾನಂದ ಕಿಣಿ ಹಾಗೂ ಸ್ವಯಂಸೇವಕರು ಚುನಾವಣಾ ಪ್ರಕ್ರಿಯೆಯಲ್ಲಿ ಸಹಕರಿಸಿದರು.  ಶುಕ್ರವಾರ ಬೆಳಿಗ್ಗೆ ಮಾಜಿ ಮೊಕ್ತೇಸರರಾದ ಸಿ . ಎಲ್ ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ ರವರು ತಮ್ಮ ಅಧಿಕಾರ ಹಾಗೂ ದೇವಳದ ಕೀಲಿಗಳನ್ನು ಶ್ರೀ ದೇವರ ಸಮ್ಮುಖದಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾಜಿ ಮೊಕ್ತೇಸರರಾದ ಎಂ . ಪದ್ಮನಾಭ ಪೈ  , ಕೊಚ್ಚಿಕಾರ್ ಜಯರಾಜ್ ಪೈ ಉಪಸ್ಥಿತರಿದ್ದರು . 

ಇತ್ತೀಚಿನ ಸುದ್ದಿ

ಜಾಹೀರಾತು