9:38 PM Tuesday21 - July 2026
ಬ್ರೇಕಿಂಗ್ ನ್ಯೂಸ್
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು…

ಇತ್ತೀಚಿನ ಸುದ್ದಿ

ಮಂಗಳೂರು: ರೇಖಾ ಸುದೇಶ್ ರಾವ್ ಅವರ ‘ಹೊಂಬೆಳಕು’ ಕವನ ಸಂಕಲನ ಲೋಕಾರ್ಪಣೆ

02/11/2023, 16:47

ಮಂಗಳೂರು(reporterkarnataka.com): ಮಂಗಳೂರಿನ ಪಿ.ವಿ.ಪ್ರದೀಪ್ ಕುಮಾರ್ ಸಾರಥ್ಯದ ಕಥಾಬಿಂದು ಪ್ರಕಾಶನದ 16ನೇ ವಾರ್ಷಿಕ ಸಾಹಿತ್ಯೋತ್ಸವ ಸಮಾರಂಭದಲ್ಲಿ ನಗರದ ಮಂಗಳಾದೇವಿ ನಿವಾಸಿ ರೇಖಾ ಸುದೇಶ ರಾವ್ ಅವರ ಹೊಂಬೆಳಕು ಕವನ ಸಂಕಲನವನ್ನು ಪುರಭವನದಲ್ಲಿ ಬಿಡುಗಡೆಗೊಳಿಸಲಾಯಿತು.

ಮೂಡುಬಿದಿರೆಯ ಶ್ರೀಪತಿ ಭಟ್ ಲೋಕಾರ್ಪಣೆ ಮಾಡಿದರು. ಮಂಗಳೂರಿನ ವೈದ್ಯ, ಬರಹಗಾರ ಡಾ ಸುರೇಶ ನೆಗಳಗುಳಿ ಅವರು ಅವರ ಕೃತಿ ವಿಮರ್ಶೆ ಮಾಡುತ್ತಾ ಅದರೊಳಗಿನ ರಚನೆಯೊಂದನ್ನು ವಾಚಿಸಿದರು.
ಮುಂಬಯಿಯ ಸರ್ವ ಅರಸ ಶಟ್ಟಿ, ವಾಮನ್ ರಾವ್ ಬೇಕಲ್, ಕೊಳ್ಚಪ್ಪೆ ಗೋವಿಂದ ಭಟ್,ರಾಧಾ ಕೃಷ್ಣ ಉಳಿಯತ್ತಡ್ಕ, ವೀಣಾ ಕಾರಂತ್ , ಜಯಾನಂದ ಪೆರಾಜೆ ಹಾಗೂ ಪಿ.ವಿ ಪ್ರದೀಪ್ ಕುಮಾರ್ ವೇದಿಕೆಯಲ್ಲಿದ್ದರು. ಬಳಿಕ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.
ರಶ್ಮಿ ಸನಿಲ್ ನಿರೂಪಣೆ ಗೈದ ಈ ಸಮಾರಂಭದಲ್ಲಿ ಹಾ.ಮ.ಸತೀಶ,ರತ್ನಾ ಭಟ್,ಕಲ್ಲಚ್ವು ಮಹೇಶ್ ನಾಯಕ್ , ಚುಸಾಪ ಅಧ್ಯಕ್ಷ ಜಿ.ಕೆ ಶಾಸ್ತ್ರಿ, ಸೌಮ್ಯಾ ಗೋಪಾಲ್, ನಾಡಿನ ಸಮಾಚಾರ‌ ಪತ್ರಿಕೆಯ ಬಸವರಾಜ್ ಯಲ್ಲಪ್ಪಾ ಉಪ್ಪಾರಟ್ಟಿ, ರೇಮಂಡ್ ಡಿಕುನ್ಹ , ರಾಧಾಕೃಷ್ಣ ಉಳಿಯತ್ತಡ್ಕ ,ವಾಮನ ರಾವ್ ಬೇಕಲ್,ವೀಣಾ ಕಾರಂತ ಮುಂತಾದವರು ಉಪಸ್ಥಿತರಿದ್ದರು
ಇದೇ ಸಮಾರಂಭದಲ್ಲಿ 50 ಕವಿಗಳ ಕೃತಿಗಳು ಲೋಕಾರ್ಪಿತವಾದುದು ವಿಶೇಷವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು