12:43 PM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ರಿಲೇಶನ್ಸ್‌ ಕೌನ್ಸಿಲ್‌ ಆಫ್‌ ಇಂಡಿಯಾದ 18ನೇ ಗ್ಲೋಬಲ್‌ ಕಾನ್‌ಕ್ಲೇವ್‌: ಲೋಗೋ ಅನಾವರಣ

31/05/2024, 20:49

ಮಂಗಳೂರು(reporterkarnataka.com): ಪಬ್ಲಿಕ್‌ ರಿಲೇಶನ್ಸ್‌ ಕೌನ್ಸಿಲ್‌ ಆಫ್‌ ಇಂಡಿಯಾ (ಪಿಆರ್‌ಸಿಐ)ದ 18ನೇ ಗ್ಲೋಬಲ್‌ ಕಾನ್‌ಕ್ಲೇವ್‌, ಮಂಗಳೂರು ಚಾಪ್ಟರ್‌ ಸಹಯೋಗಲ್ಲಿ ನಗರದ ಹೊಟೇಲ್‌ ಮೋತಿ ಮಹಲ್‌ನಲ್ಲಿ ನ. 8ರಿಂದ 10 ವರೆಗೆ ನಡೆಯಲಿದ್ದು, ಈ ಸಮಾವೇಶದ ಲೋಗೋ ಅನಾವರಣ ಶುಕ್ರವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆಯಿತು.

ಕಾರ್ಡೋಲೈಟ್‌ ಸಂಸ್ಥೆಯ ಮುಖ್ಯಸ್ಥ, ಮಾಜಿ ಮೇಯರ್‌ ದಿವಾಕರ ಕದ್ರಿ ಅವರು ಲೋಗೋ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಮಾವೇಶಕ್ಕೆ ಶುಭ ಹಾರೈಸಿದರು.
ಪಿಆರ್‌ಸಿಐ ಸ್ಥಾಪಕಾಧ್ಯಕ್ಷ ಎಂ.ಬಿ.ಜಯರಾಮ್‌ ಅವರು ಮಾತನಾಡಿ, ಈ ವರ್ಷದ ಸಮ್ಮೇಳನದ ಧ್ಯೇಯವಾಕ್ಯ ‘ರಿಕನೆಕ್ಟ್’. ಇದು ಉದ್ಯಮದಲ್ಲಿನ ಸಂಪರ್ಕಗಳನ್ನು ಮರು ನಿರ್ಮಾಣ ಮತ್ತು ಬಲಪಡಿಸುವ ಯೋಜನೆಯನ್ನು ಪ್ರತಿಬಿಂಬಿಸುತ್ತದೆ.
ಸಮಾವೇಶದಲ್ಲಿ ‘ಚಾಣಕ್ಯ’ ಮತ್ತು ‘ಕೌಟಿಲ್ಯ’ ಪ್ರಶಸ್ತಿಗಳನ್ನು ನೀಡಲಾಗುತ್ತದೆ.
ಪಿಆರ್‌, ಮಾಧ್ಯಮ ಮತ್ತು ಕಾರ್ಪೊರೇಟ್‌ ಸಂವಹನ ಮೊದಲಾದ ಕ್ಷೇತ್ರಗಳಲ್ಲಿನ ಸಾಧಕರನ್ನು ಗುರುತಿಸಲಾಗುತ್ತದೆ. ಪಿ.ಆರ್‌. ಮತ್ತು ಮಾಧ್ಯಮ ಕ್ಷೇತ್ರದಲ್ಲಿ ಆಗುವ
ಬದಲಾವಣೆಗಳ ಮೇಲೆ ನಿರ್ದಿಷ್ಟ ಒತ್ತು ನೀಡುವ ಮೂಲಕ, ಬದಲಾಗುತ್ತಿರುವ ಉದ್ಯಮದ ಸವಾಲುಗಳ
ಕುರಿತು ಒಳನೋಟವುಳ್ಳ ಚರ್ಚೆಗಳು ಹಾಗೂ ಸಂವಾದಾತ್ಮಕ ವಿಚಾರಗೋಷ್ಠಿಗಳು ಸಮಾವೇಶದಲ್ಲಿರಲಿದೆ ಎಂದರು.
ಪಿಆರ್‌ ವೃತ್ತಿಪರರು,ಸಂವಹನಕಾರರು ಮತ್ತು ಸಂಬಂಧಿತ ಉದ್ಯಮಗಳಿಗೆ ಪ್ರಧಾನ ರಾಷ್ಟ್ರೀಯ ಸಂಸ್ಥೆಯಾಗಿ ಪಿಆರ್‌ಸಿಐ ಕೆಲಸ ಮಾಡುತ್ತಿದೆ. 2004ರಲ್ಲಿ ಇದು ಸ್ಥಾಪನೆಯಾಗಿದೆ. ಬೆಂಗಳೂರಿನಲ್ಲಿ
ಪ್ರಧಾನ ಕಚೇರಿ ಹೊಂದಿದ್ದು, ದೇಶದ 59 ನಗರಗಳಲ್ಲಿ ವ್ಯಾಪಿಸಿದೆ. ಯುಎಇ ಮತ್ತು ಶ್ರೀಲಂಕಾದಲ್ಲಿ ಘಟಕಗಳನ್ನು ಹೊಂದುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಸ್ತರಿಸಿದೆ ಎಂದು ಮಾಹಿತಿ ನೀಡಿದರು.
ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಮತ್ತು ಸಮಾವೇಶದ ಚೇರ್ಮನ್‌ ಡಾ. ರಾಘವೇಂದ್ರ ಹೊಳ್ಳ,ರಾಜ್ಯ ಮುಖ್ಯಸ್ಥ ಪಶುಪತಿ ಶರ್ಮ, ಮಂಗಳೂರು ಘಟಕದ ಅಧ್ಯಕ್ಷ ಕೆನ್ಯೂಟ್‌ ಪಿಂಟೋ,ಕಾರ್ಯದರ್ಶಿ ಉದಯ್‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು