7:59 AM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ರಿಲೇಶನ್ಸ್‌ ಕೌನ್ಸಿಲ್‌ ಆಫ್‌ ಇಂಡಿಯಾದ 18ನೇ ಗ್ಲೋಬಲ್‌ ಕಾನ್‌ಕ್ಲೇವ್‌: ಲೋಗೋ ಅನಾವರಣ

31/05/2024, 20:49

ಮಂಗಳೂರು(reporterkarnataka.com): ಪಬ್ಲಿಕ್‌ ರಿಲೇಶನ್ಸ್‌ ಕೌನ್ಸಿಲ್‌ ಆಫ್‌ ಇಂಡಿಯಾ (ಪಿಆರ್‌ಸಿಐ)ದ 18ನೇ ಗ್ಲೋಬಲ್‌ ಕಾನ್‌ಕ್ಲೇವ್‌, ಮಂಗಳೂರು ಚಾಪ್ಟರ್‌ ಸಹಯೋಗಲ್ಲಿ ನಗರದ ಹೊಟೇಲ್‌ ಮೋತಿ ಮಹಲ್‌ನಲ್ಲಿ ನ. 8ರಿಂದ 10 ವರೆಗೆ ನಡೆಯಲಿದ್ದು, ಈ ಸಮಾವೇಶದ ಲೋಗೋ ಅನಾವರಣ ಶುಕ್ರವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆಯಿತು.

ಕಾರ್ಡೋಲೈಟ್‌ ಸಂಸ್ಥೆಯ ಮುಖ್ಯಸ್ಥ, ಮಾಜಿ ಮೇಯರ್‌ ದಿವಾಕರ ಕದ್ರಿ ಅವರು ಲೋಗೋ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಮಾವೇಶಕ್ಕೆ ಶುಭ ಹಾರೈಸಿದರು.
ಪಿಆರ್‌ಸಿಐ ಸ್ಥಾಪಕಾಧ್ಯಕ್ಷ ಎಂ.ಬಿ.ಜಯರಾಮ್‌ ಅವರು ಮಾತನಾಡಿ, ಈ ವರ್ಷದ ಸಮ್ಮೇಳನದ ಧ್ಯೇಯವಾಕ್ಯ ‘ರಿಕನೆಕ್ಟ್’. ಇದು ಉದ್ಯಮದಲ್ಲಿನ ಸಂಪರ್ಕಗಳನ್ನು ಮರು ನಿರ್ಮಾಣ ಮತ್ತು ಬಲಪಡಿಸುವ ಯೋಜನೆಯನ್ನು ಪ್ರತಿಬಿಂಬಿಸುತ್ತದೆ.
ಸಮಾವೇಶದಲ್ಲಿ ‘ಚಾಣಕ್ಯ’ ಮತ್ತು ‘ಕೌಟಿಲ್ಯ’ ಪ್ರಶಸ್ತಿಗಳನ್ನು ನೀಡಲಾಗುತ್ತದೆ.
ಪಿಆರ್‌, ಮಾಧ್ಯಮ ಮತ್ತು ಕಾರ್ಪೊರೇಟ್‌ ಸಂವಹನ ಮೊದಲಾದ ಕ್ಷೇತ್ರಗಳಲ್ಲಿನ ಸಾಧಕರನ್ನು ಗುರುತಿಸಲಾಗುತ್ತದೆ. ಪಿ.ಆರ್‌. ಮತ್ತು ಮಾಧ್ಯಮ ಕ್ಷೇತ್ರದಲ್ಲಿ ಆಗುವ
ಬದಲಾವಣೆಗಳ ಮೇಲೆ ನಿರ್ದಿಷ್ಟ ಒತ್ತು ನೀಡುವ ಮೂಲಕ, ಬದಲಾಗುತ್ತಿರುವ ಉದ್ಯಮದ ಸವಾಲುಗಳ
ಕುರಿತು ಒಳನೋಟವುಳ್ಳ ಚರ್ಚೆಗಳು ಹಾಗೂ ಸಂವಾದಾತ್ಮಕ ವಿಚಾರಗೋಷ್ಠಿಗಳು ಸಮಾವೇಶದಲ್ಲಿರಲಿದೆ ಎಂದರು.
ಪಿಆರ್‌ ವೃತ್ತಿಪರರು,ಸಂವಹನಕಾರರು ಮತ್ತು ಸಂಬಂಧಿತ ಉದ್ಯಮಗಳಿಗೆ ಪ್ರಧಾನ ರಾಷ್ಟ್ರೀಯ ಸಂಸ್ಥೆಯಾಗಿ ಪಿಆರ್‌ಸಿಐ ಕೆಲಸ ಮಾಡುತ್ತಿದೆ. 2004ರಲ್ಲಿ ಇದು ಸ್ಥಾಪನೆಯಾಗಿದೆ. ಬೆಂಗಳೂರಿನಲ್ಲಿ
ಪ್ರಧಾನ ಕಚೇರಿ ಹೊಂದಿದ್ದು, ದೇಶದ 59 ನಗರಗಳಲ್ಲಿ ವ್ಯಾಪಿಸಿದೆ. ಯುಎಇ ಮತ್ತು ಶ್ರೀಲಂಕಾದಲ್ಲಿ ಘಟಕಗಳನ್ನು ಹೊಂದುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಸ್ತರಿಸಿದೆ ಎಂದು ಮಾಹಿತಿ ನೀಡಿದರು.
ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಮತ್ತು ಸಮಾವೇಶದ ಚೇರ್ಮನ್‌ ಡಾ. ರಾಘವೇಂದ್ರ ಹೊಳ್ಳ,ರಾಜ್ಯ ಮುಖ್ಯಸ್ಥ ಪಶುಪತಿ ಶರ್ಮ, ಮಂಗಳೂರು ಘಟಕದ ಅಧ್ಯಕ್ಷ ಕೆನ್ಯೂಟ್‌ ಪಿಂಟೋ,ಕಾರ್ಯದರ್ಶಿ ಉದಯ್‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು