10:46 PM Tuesday9 - September 2025
ಬ್ರೇಕಿಂಗ್ ನ್ಯೂಸ್
Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ…

ಇತ್ತೀಚಿನ ಸುದ್ದಿ

ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್ ಆಗಿ ಘಟನೆ ಬೆಳಕಿಗೆ

11/09/2024, 18:21

ಮಂಗಳೂರು(reporterkarnataka.com): ಜೀವಂತ ಸಾಕು ನಾಯಿಯನ್ನು ತ್ಯಾಜ್ಯ ಸಂಗ್ರಹಿಸುವ ವಾಹನ ನೀಡಿದ ಅಘಾತಕ್ಕಾರಿ ಘಟನೆಯೊಂದು ಬುದ್ದಿವಂತರ ಜಿಲ್ಲೆ ಎನಿಸಿಕೊಂಡ ದ.ಕ. ಜಿಲ್ಲೆಯ ಮಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ನಗರದ ಡೊಂಗರಕೇರಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಬಲವಂತವಾಗಿ ನಾಯಿಯನ್ನು ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ಎಳೆದೊಯ್ಯುವ ವೀಡಿಯೊವೊಂದು ವೈರಲ್ ಆಗುವ ಮೂಲಕ ಇಡೀ ಘಟನೆ 2 ದಿನಗಳ ಬಳಿಕ ಬೆಳಕಿಗೆ ಬಂದಿದೆ.
ಡೊಂಗರಕೇರಿಯಲ್ಲಿ ವಾಸಿಸುವ ಕುಟುಂಬವೊಂದರ ಸದಸ್ಯರು ಈ ಅಮಾನವೀಯ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಮನೆ ಬಾಗಿಲಿಗೆ ಬರುವ ತ್ಯಾಜ್ಯ ವಿಲೇವಾರಿ ವಾಹನಕ್ಕೆ ಜೀವಂತ ನಾಯಿಯನ್ನು ಬಲವಂತವಾಗಿ ನೀಡಲಾಗಿದೆ. ಸಾಕು ನಾಯಿ ಮನೆ ಬಿಟ್ಟು ಹೋಗಲು ಕೇಳದಿದ್ದರೂ ಅದನ್ನು ಬಲವಂತವಾಗಿ ಎಳೆದೊಯ್ಯುವ ದೃಶ್ಯ ವೀಡಿಯೊದಲ್ಲಿ ಕಂಡು ಬಂದಿದೆ. ವಿಶೇಷವೆಂದರೆ ತ್ಯಾಜ್ಯ ಸಂಗ್ರಹಕರು ಕೂಡ ನಾಯಿಯನ್ನು ಸ್ವೀಕರಿಸಲು ನಿರಾಕರಿಸದೆ ಅದನ್ನು ಕೂಡ ತ್ಯಾಜ್ಯವೆಂದು ಪರಿಗಣಿಸಿ ಕೊಂಡೊಯ್ದಿದ್ದಾರೆ.


ಈ ಘಟನೆಯನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆಗಿದೆ.
ವೀಡಿಯೊ ವೈರಲ್ ಆಗುತ್ತಿದ್ದಂತೆ
ಘಟನೆ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ ಪಶುಪಾಲನೆ ಇಲಾಖೆ ಮಂಗಳೂರು ಮಹಾನಗರ ಪಾಲಿಕೆಗೆ ನೋಟಿಸ್‌ ನೀಡಿದೆ. ತ್ಯಾಜ್ಯ ವಿಲೇವಾರಿ ವಾಹನ ಕೊಂಡೊಯ್ದಿದ್ದ ಶ್ವಾನವನ್ನು ಪಚ್ಚನಾಡಿ ಡಂಪಿಂಗ್ ಪ್ರದೇಶದಲ್ಲಿ ಬಿಡಲಾಗಿದೆ. ಆದರೆ ಶ್ವಾನ ಇನ್ನೂ ಪತ್ತೆಯಾಗಿಲ್ಲ. ಪಚ್ಚನಾಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಕುವ ಕೆಲಸ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು