8:38 PM Sunday1 - February 2026
ಬ್ರೇಕಿಂಗ್ ನ್ಯೂಸ್
ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್…

ಇತ್ತೀಚಿನ ಸುದ್ದಿ

ಮಂಗಳೂರು ಶರಣ ಸಾಹಿತ್ಯ ಪರಿಷತ್ ವತಿಯಿಂದ ಕದಳಿ ಮಹಿಳಾ ವೇದಿಕೆ ಉದ್ಘಾಟನೆ

16/08/2022, 08:56

ಮಂಗಳೂರು(reporterkarnataka.com): ಮಂಗಳೂರು ನಗರ ಶರಣ ಸಾಹಿತ್ಯ ಪರಿಷತ್ತಿನ ಕದಳಿ ಮಹಿಳಾ ವೇದಿಕೆ ವತಿಯಿಂದ ಕದಳಿ ಮಹಿಳಾ ವೇದಿಕೆಯ ಉದ್ಘಾಟನಾ ಸಮಾರಂಭ ನಗರದ ಶಾರದಾ ಕಾಲೇಜು ಬಳಿಯಿರುವ ವಾತ್ಸಲ್ಯ ಧಾಮದ ಶತಾಯುಷಿ ದಂಪತಿ ಮಂಟಪದಲ್ಲಿ  ಜರುಗಿತು. ಕಾರ್ಯಕ್ರಮವನ್ನು ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಜಗನ್ನಾಥಪ್ಪ ಪಡಸಾಲೆ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ, ಕದಳಿ ಮಹಿಳಾ ವೇದಿಕೆಯು ಕೇವಲ ಮಹಿಳೆಯರಿಗಾಗಿ ಮಾತ್ರ ಇರುವಂತದ್ದು. ಮಹಿಳೆಯು ಕೇವಲ ಮನೆಯ ನಾಲ್ಕು ಗೋಡೆಗೆ ಸೀಮಿತವಾಗಿರದೆ ಚುರುಕುತನದಿಂದ ಎಲ್ಲಾ ವಿಭಾಗಗಳಲ್ಲಿ ತನ್ನನ್ನು ತೊಡಗಿಸಿಕೊಂಡರೆ ಮಾತ್ರ ಆಕೆ ಉನ್ನತಿಯನ್ನು ಕಾಣಲು ಸಾಧ್ಯ. ಆದುದರಿಂದ ಹೆಚ್ಚು ಹೆಚ್ಚು ಮಹಿಳೆಯರು ಕದಳಿ ಮಹಿಳಾ ವೇದಿಕೆಗೆ ಸೇರುವಂತಾಗಬೇಕು. ಇಲ್ಲಿ ಯಾವುದೇ ಜಾತಿ ಧರ್ಮದ ಬೇಧವಿಲ್ಲ. ಮುಕ್ತವಾಗಿ ಎಲ್ಲಾ ಮಹಿಳೆಯರು ಭಾಗವಹಿಸಬಹುದು ಎಂದು ತಿಳಿಸಿದರು. 

12ನೇ

ಶತಮಾನದಲ್ಲಿ ಅಕ್ಕಮಹಾದೇವಿ, ನಾಗಮ್ಮ ರಂತವರು ವಚನ ಸಾಹಿತ್ಯವನ್ನು ಬರೆದರು. ಮಹಿಳೆಯು ತನ್ನನ್ನು ತಾನು ತಿಳಿದುಕೊಂಡರೆ ಆಕೆ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆಯನ್ನು ಮಾಡಬಹುದು ಎಂದು ಕಿವಿಮಾತು ಹೇಳಿದರು. 

ನಿರ್ಮಲಾ ಚಂದ್ರಶೇಖರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶತಾಯುಷಿ ದಂಪತಿ ಮಂಟಪದ ಮುಖ್ಯಸ್ಥರಾದ ಶ್ರೀನಾಥ್ ಹೆಗ್ಡೆಯವರು ಶರಣ ಸಾಹಿತ್ಯದ ಬಗ್ಗೆ ಒಂದೆರಡು ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಶಕುಂತಲಾ ಅವರು ಚಿಂತನೆಯನ್ನು ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಎನ್.ಆರ್. ಕಾಮತ್, ನರಸಿಂಹ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಸ್ವಾತಿ ಅವರು ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ದೇವಿ ಸ್ತೋತ್ರ ಹಾಗೂ ಹನುಮಾನ್ ಚಾಲೀಸ್ ಪಠನೆಯನ್ನು ಕಾರ್ಯಕ್ರಮ ನಿರೂಪಕರಾದ ಸುರೇಖಾ ಅವರು ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು