9:22 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಮಂಗಳೂರು ಶರಣ ಸಾಹಿತ್ಯ ಪರಿಷತ್ ವತಿಯಿಂದ ಕದಳಿ ಮಹಿಳಾ ವೇದಿಕೆ ಉದ್ಘಾಟನೆ

16/08/2022, 08:56

ಮಂಗಳೂರು(reporterkarnataka.com): ಮಂಗಳೂರು ನಗರ ಶರಣ ಸಾಹಿತ್ಯ ಪರಿಷತ್ತಿನ ಕದಳಿ ಮಹಿಳಾ ವೇದಿಕೆ ವತಿಯಿಂದ ಕದಳಿ ಮಹಿಳಾ ವೇದಿಕೆಯ ಉದ್ಘಾಟನಾ ಸಮಾರಂಭ ನಗರದ ಶಾರದಾ ಕಾಲೇಜು ಬಳಿಯಿರುವ ವಾತ್ಸಲ್ಯ ಧಾಮದ ಶತಾಯುಷಿ ದಂಪತಿ ಮಂಟಪದಲ್ಲಿ  ಜರುಗಿತು. ಕಾರ್ಯಕ್ರಮವನ್ನು ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಜಗನ್ನಾಥಪ್ಪ ಪಡಸಾಲೆ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ, ಕದಳಿ ಮಹಿಳಾ ವೇದಿಕೆಯು ಕೇವಲ ಮಹಿಳೆಯರಿಗಾಗಿ ಮಾತ್ರ ಇರುವಂತದ್ದು. ಮಹಿಳೆಯು ಕೇವಲ ಮನೆಯ ನಾಲ್ಕು ಗೋಡೆಗೆ ಸೀಮಿತವಾಗಿರದೆ ಚುರುಕುತನದಿಂದ ಎಲ್ಲಾ ವಿಭಾಗಗಳಲ್ಲಿ ತನ್ನನ್ನು ತೊಡಗಿಸಿಕೊಂಡರೆ ಮಾತ್ರ ಆಕೆ ಉನ್ನತಿಯನ್ನು ಕಾಣಲು ಸಾಧ್ಯ. ಆದುದರಿಂದ ಹೆಚ್ಚು ಹೆಚ್ಚು ಮಹಿಳೆಯರು ಕದಳಿ ಮಹಿಳಾ ವೇದಿಕೆಗೆ ಸೇರುವಂತಾಗಬೇಕು. ಇಲ್ಲಿ ಯಾವುದೇ ಜಾತಿ ಧರ್ಮದ ಬೇಧವಿಲ್ಲ. ಮುಕ್ತವಾಗಿ ಎಲ್ಲಾ ಮಹಿಳೆಯರು ಭಾಗವಹಿಸಬಹುದು ಎಂದು ತಿಳಿಸಿದರು. 

12ನೇ

ಶತಮಾನದಲ್ಲಿ ಅಕ್ಕಮಹಾದೇವಿ, ನಾಗಮ್ಮ ರಂತವರು ವಚನ ಸಾಹಿತ್ಯವನ್ನು ಬರೆದರು. ಮಹಿಳೆಯು ತನ್ನನ್ನು ತಾನು ತಿಳಿದುಕೊಂಡರೆ ಆಕೆ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆಯನ್ನು ಮಾಡಬಹುದು ಎಂದು ಕಿವಿಮಾತು ಹೇಳಿದರು. 

ನಿರ್ಮಲಾ ಚಂದ್ರಶೇಖರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶತಾಯುಷಿ ದಂಪತಿ ಮಂಟಪದ ಮುಖ್ಯಸ್ಥರಾದ ಶ್ರೀನಾಥ್ ಹೆಗ್ಡೆಯವರು ಶರಣ ಸಾಹಿತ್ಯದ ಬಗ್ಗೆ ಒಂದೆರಡು ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಶಕುಂತಲಾ ಅವರು ಚಿಂತನೆಯನ್ನು ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಎನ್.ಆರ್. ಕಾಮತ್, ನರಸಿಂಹ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಸ್ವಾತಿ ಅವರು ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ದೇವಿ ಸ್ತೋತ್ರ ಹಾಗೂ ಹನುಮಾನ್ ಚಾಲೀಸ್ ಪಠನೆಯನ್ನು ಕಾರ್ಯಕ್ರಮ ನಿರೂಪಕರಾದ ಸುರೇಖಾ ಅವರು ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು