8:48 AM Tuesday25 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನಲ್ಲಿ ಬಿಎಸ್ಸಿ ವಿಶುವಲ್ ಕಮ್ಯುನಿಕೇಶನ್ ಶಿಕ್ಷಣ

18/09/2022, 23:34

ಮಂಗಳೂರು(reporterkarnataka.com):ನಗರದ ಸಂತ ಅಲೋಶಿಯಸ್ ಕಾಲೇಜು ಪತ್ರಿಕೋದ್ಯಮ ವಿಭಾಗದಲ್ಲಿ ಹೊಸತಾಗಿ  ಬಿಎಸ್ಸಿ ವಿಶುವಲ್ ಕಮ್ಯುನಿಕೇಶನ್ ಎಂಬ ಕೋರ್ಸ್ ನ್ನು ಅಲೋಶಿಯಸ್ ವಿದ್ಯಾಸಂಸ್ಥೆಗಳ ರೆಕ್ಟರ್ ವಂ. ಫಾ ಮೆಲ್ವಿನ್ ಜೆ ಪಿಂಟೋ  ಲೋಕಾರ್ಪಣೆಗೊಳಿಸಿದರು.

ಕಾರ್ಯಕ್ರಮದ  ಉದ್ಘಾಟನೆಯನ್ನು  ಕಾಲೇಜಿನ ಎಲ್ ಎಫ್ ರಸ್ಕಿನ್ಹಾ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಂದ ಪೋಲರಾಯ್ಡ್ ಕ್ಯಾಮರಾದಿಂದ ಭಾವಚಿತ್ರ ತೆಗೆಯೋ ಮುಖಾಂತರ ಜರುಗಿತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಮೊಟ್ಟ ಮೊದಲ ಬಾರಿಗೆ ವಿಶುವಲ್ ಕಮ್ಯೂನಿಕೇಶನ್ ನಲ್ಲಿ ಬಿ.ಎಸ್ಸಿ. ಪದವಿಯನ್ನು ಪರಿಚಯಿಸಲಾಗುತ್ತಿದೆ.

ಕಾರ್ಯಕ್ರಮದ ಮುಖ್ಯ ಅತಿಥಿ, ರೀಲ್ ಟ್ರೈಬ್ ಡಿಜಿಟಲ್ ಸಂಸ್ಥೆಯ ಸ್ಥಾಪಕ  ಹೃಶಿಕೇಶ್ ಅನಿಲ್ ಕುಮಾರ್ ರವರು ವಿಶುವಲ್ ಕಮ್ಯೂನಿಕೇಶನ್ ವಿಭಾಗದ ಅಧಿಕೃತ ಯೂಟ್ಯೂಬ್ ವಾಹಿನಿ ಮತ್ತು ‘ ಕ್ಯಾಂಪಸ್ ಬಝ್’ ಎಂಬ ವಿದ್ಯಾರ್ಥಿ ಬ್ಲಾಗ್ ಗೆ ಚಾಲನೆ ನೀಡಿದರು.

ಅವರು ಮಾತನಾಡಿ ಮೊದಲ ವರ್ಷದ ಪದವಿಗೆ ಸೇರಲು ಬಯಸುವ ವಿದ್ಯಾರ್ಥಿಗಳು ನಗರದ ಮೊಟ್ಟ ಮೊದಲ ವಿಶುವಲ್ ಕಮ್ಯೂನಿಕೇಶನ್ ಬ್ಯಾಚ್ ನ ಭಾಗ ಎಂಬ ಹೆಗ್ಗಳಿಕೆಗೆ ಪಾತ್ರವಾಗಬಹುದು ಎಂದರು.

ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ತಯಾರಿಸಲಾದ ಮರಳು ಕಲೆಯ ಚಿತ್ರವೊಂದನ್ನೂ ಅನಾವರಣಗೊಳಿಸಲಾಯಿತು. 

ಈ ಕೋರ್ಸ್ ನ ಉದ್ದೇಶ ಕಲೆ, ಸೃಜನಶೀಲತೆ, ಮತ್ತು ತಂತ್ರಜ್ಞಾನದ ಸಂಗಮದೊಂದಿಗೆ ತಮ್ಮ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ದಾರಿದೀಪವಾಗುವುದಲ್ಲದೆ, ಆಧುನಿಕ ಮಾಧ್ಯಮ ಜಗತ್ತಿಗೆ ಸಮರ್ಥ ಅಭ್ಯರ್ಥಿಗಳನ್ನು ತಯಾರಿಸುವುದಾಗಿದೆ. 

ಅಲೋಶಿಯಸ್ ವಿದ್ಯಾಸಂಸ್ಥೆಗಳ ರೆಕ್ಟರ್ ವಂ. ಫಾ ಮೆಲ್ವಿನ್ ಜೆ ಪಿಂಟೋ ಎಸ್ ಜೆ, ಪ್ರಾಂಶುಪಾಲರಾದ ವಂ. ಡಾ ಪ್ರವೀಣ್ ಮಾರ್ಟಿಸ್, ಎಸ್ ಜೆ, ಕುಲಪತಿ ಡಾ ಆಲ್ವಿನ್ ಡಿಸಾ, ವಿಭಾಗ ಮುಖ್ಯಸ್ಥರಾದ ಡಾ ಶ್ವೇತಾ ಮಂಗಳತ್ ಮತ್ತು ಕೋರ್ಸ್ ಸಂಯೋಜಕರಾದ ಅಬ್ದುಲ್ ರಶೀದ್, ಕ್ಸೇವಿಯರ್ ವಿಜ್ಞಾನ ಬ್ಲಾಕ್ ನ ನಿರ್ದೇಶಕ ಡಾ ನಾರಾಯಣ ಭಟ್, AIMIT ಬೀರಿಯ ನಿರ್ದೇಶಕರಾದ ವಂ. ಡಾ ಮೆಲ್ವಿನ್ ಪಿಂಟೋ ಉಪಸ್ಥಿತರಿದ್ದರು. ಸಂವಾದ ಕಾರ್ಯಕ್ರಮ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು