2:06 AM Tuesday28 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನಲ್ಲಿ ಬಿಎಸ್ಸಿ ವಿಶುವಲ್ ಕಮ್ಯುನಿಕೇಶನ್ ಶಿಕ್ಷಣ

18/09/2022, 23:34

ಮಂಗಳೂರು(reporterkarnataka.com):ನಗರದ ಸಂತ ಅಲೋಶಿಯಸ್ ಕಾಲೇಜು ಪತ್ರಿಕೋದ್ಯಮ ವಿಭಾಗದಲ್ಲಿ ಹೊಸತಾಗಿ  ಬಿಎಸ್ಸಿ ವಿಶುವಲ್ ಕಮ್ಯುನಿಕೇಶನ್ ಎಂಬ ಕೋರ್ಸ್ ನ್ನು ಅಲೋಶಿಯಸ್ ವಿದ್ಯಾಸಂಸ್ಥೆಗಳ ರೆಕ್ಟರ್ ವಂ. ಫಾ ಮೆಲ್ವಿನ್ ಜೆ ಪಿಂಟೋ  ಲೋಕಾರ್ಪಣೆಗೊಳಿಸಿದರು.

ಕಾರ್ಯಕ್ರಮದ  ಉದ್ಘಾಟನೆಯನ್ನು  ಕಾಲೇಜಿನ ಎಲ್ ಎಫ್ ರಸ್ಕಿನ್ಹಾ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಂದ ಪೋಲರಾಯ್ಡ್ ಕ್ಯಾಮರಾದಿಂದ ಭಾವಚಿತ್ರ ತೆಗೆಯೋ ಮುಖಾಂತರ ಜರುಗಿತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಮೊಟ್ಟ ಮೊದಲ ಬಾರಿಗೆ ವಿಶುವಲ್ ಕಮ್ಯೂನಿಕೇಶನ್ ನಲ್ಲಿ ಬಿ.ಎಸ್ಸಿ. ಪದವಿಯನ್ನು ಪರಿಚಯಿಸಲಾಗುತ್ತಿದೆ.

ಕಾರ್ಯಕ್ರಮದ ಮುಖ್ಯ ಅತಿಥಿ, ರೀಲ್ ಟ್ರೈಬ್ ಡಿಜಿಟಲ್ ಸಂಸ್ಥೆಯ ಸ್ಥಾಪಕ  ಹೃಶಿಕೇಶ್ ಅನಿಲ್ ಕುಮಾರ್ ರವರು ವಿಶುವಲ್ ಕಮ್ಯೂನಿಕೇಶನ್ ವಿಭಾಗದ ಅಧಿಕೃತ ಯೂಟ್ಯೂಬ್ ವಾಹಿನಿ ಮತ್ತು ‘ ಕ್ಯಾಂಪಸ್ ಬಝ್’ ಎಂಬ ವಿದ್ಯಾರ್ಥಿ ಬ್ಲಾಗ್ ಗೆ ಚಾಲನೆ ನೀಡಿದರು.

ಅವರು ಮಾತನಾಡಿ ಮೊದಲ ವರ್ಷದ ಪದವಿಗೆ ಸೇರಲು ಬಯಸುವ ವಿದ್ಯಾರ್ಥಿಗಳು ನಗರದ ಮೊಟ್ಟ ಮೊದಲ ವಿಶುವಲ್ ಕಮ್ಯೂನಿಕೇಶನ್ ಬ್ಯಾಚ್ ನ ಭಾಗ ಎಂಬ ಹೆಗ್ಗಳಿಕೆಗೆ ಪಾತ್ರವಾಗಬಹುದು ಎಂದರು.

ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ತಯಾರಿಸಲಾದ ಮರಳು ಕಲೆಯ ಚಿತ್ರವೊಂದನ್ನೂ ಅನಾವರಣಗೊಳಿಸಲಾಯಿತು. 

ಈ ಕೋರ್ಸ್ ನ ಉದ್ದೇಶ ಕಲೆ, ಸೃಜನಶೀಲತೆ, ಮತ್ತು ತಂತ್ರಜ್ಞಾನದ ಸಂಗಮದೊಂದಿಗೆ ತಮ್ಮ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ದಾರಿದೀಪವಾಗುವುದಲ್ಲದೆ, ಆಧುನಿಕ ಮಾಧ್ಯಮ ಜಗತ್ತಿಗೆ ಸಮರ್ಥ ಅಭ್ಯರ್ಥಿಗಳನ್ನು ತಯಾರಿಸುವುದಾಗಿದೆ. 

ಅಲೋಶಿಯಸ್ ವಿದ್ಯಾಸಂಸ್ಥೆಗಳ ರೆಕ್ಟರ್ ವಂ. ಫಾ ಮೆಲ್ವಿನ್ ಜೆ ಪಿಂಟೋ ಎಸ್ ಜೆ, ಪ್ರಾಂಶುಪಾಲರಾದ ವಂ. ಡಾ ಪ್ರವೀಣ್ ಮಾರ್ಟಿಸ್, ಎಸ್ ಜೆ, ಕುಲಪತಿ ಡಾ ಆಲ್ವಿನ್ ಡಿಸಾ, ವಿಭಾಗ ಮುಖ್ಯಸ್ಥರಾದ ಡಾ ಶ್ವೇತಾ ಮಂಗಳತ್ ಮತ್ತು ಕೋರ್ಸ್ ಸಂಯೋಜಕರಾದ ಅಬ್ದುಲ್ ರಶೀದ್, ಕ್ಸೇವಿಯರ್ ವಿಜ್ಞಾನ ಬ್ಲಾಕ್ ನ ನಿರ್ದೇಶಕ ಡಾ ನಾರಾಯಣ ಭಟ್, AIMIT ಬೀರಿಯ ನಿರ್ದೇಶಕರಾದ ವಂ. ಡಾ ಮೆಲ್ವಿನ್ ಪಿಂಟೋ ಉಪಸ್ಥಿತರಿದ್ದರು. ಸಂವಾದ ಕಾರ್ಯಕ್ರಮ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು