11:51 AM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಮಂಗಳೂರು: ಸೆಪ್ಟೆಂಬರ್ 6ರಿಂದ 3 ದಿನಗಳ ಕಾಲ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾಟ

26/07/2024, 22:13

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ ಸೆಪ್ಟೆಂಬರ್ 6ರಿಂದ 8ರವರೆಗೆ ಆಯೋಜಿಸಲಾಗಿದೆ.ಈ ಕುರಿತು ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕರಾಟೆ ಕ್ರೀಡಾಕೂಟದ ಸಂಘಟಕ ಡಾ. ರಾಹುಲ್ ಟಿ. ಜಿ. ಸಭೆಯಲ್ಲಿ ಮಾತನಾಡಿ “ಶೌರ್ಯ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ -2024 ಪಂದ್ಯಾಟದಲ್ಲಿ ವಿವಿಧ ದೇಶಗಳ ಹಲವು ಖ್ಯಾತ ಕರಾಟೆ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಮಂಗಳೂರಿನ ಕೋರ್ಡಲ್ ಚರ್ಚ್ ಮೈದಾನದಲ್ಲಿ ಕ್ರೀಡಾಕೂಟ ನಡೆಯಲಿದೆ. ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ವಿವಿಧ ದೇಶಗಳಿಂದ ಈ ಪಂದ್ಯಾಟಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿದರು.
ವಿಶ್ವ ಕರಾಟೆ ಒಕ್ಕೂಟದ ನಿಯಮಾವಳಿಗಳಂತೆ ಪಂದ್ಯಾಟ ನಡೆಯಲಿದೆ ಅಂತಾರಾಷ್ಟ್ರೀಯ ರೆಫ್ರಿಗಳು ಸ್ಪರ್ಧೆಯನ್ನು ನಿರ್ವಹಿಸುವರು ಎಂದು ನುಡಿದರು.
ಅಂತಾರಾಷ್ಟ್ರೀಯ ಕರಾಟೆ ಕ್ರೀಡಾಕೂಟದ ಹಿನ್ನೆಲೆಯಲ್ಲಿ ವಸತಿ, ಸಂಚಾರ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ವಿವಿಧ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕಾಗಿದೆ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಮಾತನಾಡಿ, ಈ ಕ್ರೀಡಾಕೂಟಕ್ಕೆ ಜಿಲ್ಲಾಡಳಿತ ವತಿಯಿಂದ ಅಗತ್ಯ ನೆರವು ನೀಡಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಕ್ರೀಡಾಕೂಟ ಸಂಘಟಕರು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕರಾಟೆ ಕ್ರೀಡಾಕೂಟದ ಮಾಹಿತಿ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
ಸಭೆಯಲ್ಲಿ ಯುವಜನ ಸೇನೆ ಮತ್ತು ಕ್ರೀಡಾ ಉಪ ನಿರ್ದೇಶಕ ಪ್ರವೀಣ್ ಡಿಸೋಜಾ, ಸಹಾಯಕ ಪೊಲೀಸ್ ಆಯುಕ್ತ ನಜ್ಮಾ ಫಾರೂಕಿ, ಕರಾಟೆ ಸಂಘಟನೆಗಳ ಪದಾಧಿಕಾರಿಗಳಾದ ಸುರೇಂದ್ರ, ಸೂರಜ್ ಶೆಟ್ಟಿ, ರಾಜ್‌ಗೋಪಾಲ್ ರೈ, ಮತ್ತಿತರರು ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು