2:32 AM Wednesday2 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಂಗಳೂರು: ಸೆಪ್ಟೆಂಬರ್ 6ರಿಂದ 3 ದಿನಗಳ ಕಾಲ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾಟ

26/07/2024, 22:13

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ ಸೆಪ್ಟೆಂಬರ್ 6ರಿಂದ 8ರವರೆಗೆ ಆಯೋಜಿಸಲಾಗಿದೆ.ಈ ಕುರಿತು ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕರಾಟೆ ಕ್ರೀಡಾಕೂಟದ ಸಂಘಟಕ ಡಾ. ರಾಹುಲ್ ಟಿ. ಜಿ. ಸಭೆಯಲ್ಲಿ ಮಾತನಾಡಿ “ಶೌರ್ಯ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ -2024 ಪಂದ್ಯಾಟದಲ್ಲಿ ವಿವಿಧ ದೇಶಗಳ ಹಲವು ಖ್ಯಾತ ಕರಾಟೆ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಮಂಗಳೂರಿನ ಕೋರ್ಡಲ್ ಚರ್ಚ್ ಮೈದಾನದಲ್ಲಿ ಕ್ರೀಡಾಕೂಟ ನಡೆಯಲಿದೆ. ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ವಿವಿಧ ದೇಶಗಳಿಂದ ಈ ಪಂದ್ಯಾಟಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿದರು.
ವಿಶ್ವ ಕರಾಟೆ ಒಕ್ಕೂಟದ ನಿಯಮಾವಳಿಗಳಂತೆ ಪಂದ್ಯಾಟ ನಡೆಯಲಿದೆ ಅಂತಾರಾಷ್ಟ್ರೀಯ ರೆಫ್ರಿಗಳು ಸ್ಪರ್ಧೆಯನ್ನು ನಿರ್ವಹಿಸುವರು ಎಂದು ನುಡಿದರು.
ಅಂತಾರಾಷ್ಟ್ರೀಯ ಕರಾಟೆ ಕ್ರೀಡಾಕೂಟದ ಹಿನ್ನೆಲೆಯಲ್ಲಿ ವಸತಿ, ಸಂಚಾರ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ವಿವಿಧ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕಾಗಿದೆ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಮಾತನಾಡಿ, ಈ ಕ್ರೀಡಾಕೂಟಕ್ಕೆ ಜಿಲ್ಲಾಡಳಿತ ವತಿಯಿಂದ ಅಗತ್ಯ ನೆರವು ನೀಡಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಕ್ರೀಡಾಕೂಟ ಸಂಘಟಕರು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕರಾಟೆ ಕ್ರೀಡಾಕೂಟದ ಮಾಹಿತಿ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
ಸಭೆಯಲ್ಲಿ ಯುವಜನ ಸೇನೆ ಮತ್ತು ಕ್ರೀಡಾ ಉಪ ನಿರ್ದೇಶಕ ಪ್ರವೀಣ್ ಡಿಸೋಜಾ, ಸಹಾಯಕ ಪೊಲೀಸ್ ಆಯುಕ್ತ ನಜ್ಮಾ ಫಾರೂಕಿ, ಕರಾಟೆ ಸಂಘಟನೆಗಳ ಪದಾಧಿಕಾರಿಗಳಾದ ಸುರೇಂದ್ರ, ಸೂರಜ್ ಶೆಟ್ಟಿ, ರಾಜ್‌ಗೋಪಾಲ್ ರೈ, ಮತ್ತಿತರರು ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು