6:10 AM Sunday19 - July 2026
ಬ್ರೇಕಿಂಗ್ ನ್ಯೂಸ್
Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ…

ಇತ್ತೀಚಿನ ಸುದ್ದಿ

ಮಂಗಳೂರು: ಸೆಪ್ಟೆಂಬರ್ 6ರಿಂದ 3 ದಿನಗಳ ಕಾಲ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾಟ

26/07/2024, 22:13

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ ಸೆಪ್ಟೆಂಬರ್ 6ರಿಂದ 8ರವರೆಗೆ ಆಯೋಜಿಸಲಾಗಿದೆ.ಈ ಕುರಿತು ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕರಾಟೆ ಕ್ರೀಡಾಕೂಟದ ಸಂಘಟಕ ಡಾ. ರಾಹುಲ್ ಟಿ. ಜಿ. ಸಭೆಯಲ್ಲಿ ಮಾತನಾಡಿ “ಶೌರ್ಯ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ -2024 ಪಂದ್ಯಾಟದಲ್ಲಿ ವಿವಿಧ ದೇಶಗಳ ಹಲವು ಖ್ಯಾತ ಕರಾಟೆ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಮಂಗಳೂರಿನ ಕೋರ್ಡಲ್ ಚರ್ಚ್ ಮೈದಾನದಲ್ಲಿ ಕ್ರೀಡಾಕೂಟ ನಡೆಯಲಿದೆ. ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ವಿವಿಧ ದೇಶಗಳಿಂದ ಈ ಪಂದ್ಯಾಟಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿದರು.
ವಿಶ್ವ ಕರಾಟೆ ಒಕ್ಕೂಟದ ನಿಯಮಾವಳಿಗಳಂತೆ ಪಂದ್ಯಾಟ ನಡೆಯಲಿದೆ ಅಂತಾರಾಷ್ಟ್ರೀಯ ರೆಫ್ರಿಗಳು ಸ್ಪರ್ಧೆಯನ್ನು ನಿರ್ವಹಿಸುವರು ಎಂದು ನುಡಿದರು.
ಅಂತಾರಾಷ್ಟ್ರೀಯ ಕರಾಟೆ ಕ್ರೀಡಾಕೂಟದ ಹಿನ್ನೆಲೆಯಲ್ಲಿ ವಸತಿ, ಸಂಚಾರ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ವಿವಿಧ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕಾಗಿದೆ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಮಾತನಾಡಿ, ಈ ಕ್ರೀಡಾಕೂಟಕ್ಕೆ ಜಿಲ್ಲಾಡಳಿತ ವತಿಯಿಂದ ಅಗತ್ಯ ನೆರವು ನೀಡಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಕ್ರೀಡಾಕೂಟ ಸಂಘಟಕರು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕರಾಟೆ ಕ್ರೀಡಾಕೂಟದ ಮಾಹಿತಿ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
ಸಭೆಯಲ್ಲಿ ಯುವಜನ ಸೇನೆ ಮತ್ತು ಕ್ರೀಡಾ ಉಪ ನಿರ್ದೇಶಕ ಪ್ರವೀಣ್ ಡಿಸೋಜಾ, ಸಹಾಯಕ ಪೊಲೀಸ್ ಆಯುಕ್ತ ನಜ್ಮಾ ಫಾರೂಕಿ, ಕರಾಟೆ ಸಂಘಟನೆಗಳ ಪದಾಧಿಕಾರಿಗಳಾದ ಸುರೇಂದ್ರ, ಸೂರಜ್ ಶೆಟ್ಟಿ, ರಾಜ್‌ಗೋಪಾಲ್ ರೈ, ಮತ್ತಿತರರು ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು