7:39 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮಂಗಳೂರು: ಸೆಪ್ಟೆಂಬರ್ 6ರಿಂದ 3 ದಿನಗಳ ಕಾಲ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾಟ

26/07/2024, 22:13

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ ಸೆಪ್ಟೆಂಬರ್ 6ರಿಂದ 8ರವರೆಗೆ ಆಯೋಜಿಸಲಾಗಿದೆ.ಈ ಕುರಿತು ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕರಾಟೆ ಕ್ರೀಡಾಕೂಟದ ಸಂಘಟಕ ಡಾ. ರಾಹುಲ್ ಟಿ. ಜಿ. ಸಭೆಯಲ್ಲಿ ಮಾತನಾಡಿ “ಶೌರ್ಯ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ -2024 ಪಂದ್ಯಾಟದಲ್ಲಿ ವಿವಿಧ ದೇಶಗಳ ಹಲವು ಖ್ಯಾತ ಕರಾಟೆ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಮಂಗಳೂರಿನ ಕೋರ್ಡಲ್ ಚರ್ಚ್ ಮೈದಾನದಲ್ಲಿ ಕ್ರೀಡಾಕೂಟ ನಡೆಯಲಿದೆ. ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ವಿವಿಧ ದೇಶಗಳಿಂದ ಈ ಪಂದ್ಯಾಟಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿದರು.
ವಿಶ್ವ ಕರಾಟೆ ಒಕ್ಕೂಟದ ನಿಯಮಾವಳಿಗಳಂತೆ ಪಂದ್ಯಾಟ ನಡೆಯಲಿದೆ ಅಂತಾರಾಷ್ಟ್ರೀಯ ರೆಫ್ರಿಗಳು ಸ್ಪರ್ಧೆಯನ್ನು ನಿರ್ವಹಿಸುವರು ಎಂದು ನುಡಿದರು.
ಅಂತಾರಾಷ್ಟ್ರೀಯ ಕರಾಟೆ ಕ್ರೀಡಾಕೂಟದ ಹಿನ್ನೆಲೆಯಲ್ಲಿ ವಸತಿ, ಸಂಚಾರ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ವಿವಿಧ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕಾಗಿದೆ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಮಾತನಾಡಿ, ಈ ಕ್ರೀಡಾಕೂಟಕ್ಕೆ ಜಿಲ್ಲಾಡಳಿತ ವತಿಯಿಂದ ಅಗತ್ಯ ನೆರವು ನೀಡಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಕ್ರೀಡಾಕೂಟ ಸಂಘಟಕರು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕರಾಟೆ ಕ್ರೀಡಾಕೂಟದ ಮಾಹಿತಿ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
ಸಭೆಯಲ್ಲಿ ಯುವಜನ ಸೇನೆ ಮತ್ತು ಕ್ರೀಡಾ ಉಪ ನಿರ್ದೇಶಕ ಪ್ರವೀಣ್ ಡಿಸೋಜಾ, ಸಹಾಯಕ ಪೊಲೀಸ್ ಆಯುಕ್ತ ನಜ್ಮಾ ಫಾರೂಕಿ, ಕರಾಟೆ ಸಂಘಟನೆಗಳ ಪದಾಧಿಕಾರಿಗಳಾದ ಸುರೇಂದ್ರ, ಸೂರಜ್ ಶೆಟ್ಟಿ, ರಾಜ್‌ಗೋಪಾಲ್ ರೈ, ಮತ್ತಿತರರು ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು