6:38 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ

ಇತ್ತೀಚಿನ ಸುದ್ದಿ

ಮಂಗಳೂರು: ಸೆಪ್ಟೆಂಬರ್ 6ರಿಂದ 3 ದಿನಗಳ ಕಾಲ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾಟ

26/07/2024, 22:13

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ ಸೆಪ್ಟೆಂಬರ್ 6ರಿಂದ 8ರವರೆಗೆ ಆಯೋಜಿಸಲಾಗಿದೆ.ಈ ಕುರಿತು ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕರಾಟೆ ಕ್ರೀಡಾಕೂಟದ ಸಂಘಟಕ ಡಾ. ರಾಹುಲ್ ಟಿ. ಜಿ. ಸಭೆಯಲ್ಲಿ ಮಾತನಾಡಿ “ಶೌರ್ಯ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ -2024 ಪಂದ್ಯಾಟದಲ್ಲಿ ವಿವಿಧ ದೇಶಗಳ ಹಲವು ಖ್ಯಾತ ಕರಾಟೆ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಮಂಗಳೂರಿನ ಕೋರ್ಡಲ್ ಚರ್ಚ್ ಮೈದಾನದಲ್ಲಿ ಕ್ರೀಡಾಕೂಟ ನಡೆಯಲಿದೆ. ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ವಿವಿಧ ದೇಶಗಳಿಂದ ಈ ಪಂದ್ಯಾಟಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿದರು.
ವಿಶ್ವ ಕರಾಟೆ ಒಕ್ಕೂಟದ ನಿಯಮಾವಳಿಗಳಂತೆ ಪಂದ್ಯಾಟ ನಡೆಯಲಿದೆ ಅಂತಾರಾಷ್ಟ್ರೀಯ ರೆಫ್ರಿಗಳು ಸ್ಪರ್ಧೆಯನ್ನು ನಿರ್ವಹಿಸುವರು ಎಂದು ನುಡಿದರು.
ಅಂತಾರಾಷ್ಟ್ರೀಯ ಕರಾಟೆ ಕ್ರೀಡಾಕೂಟದ ಹಿನ್ನೆಲೆಯಲ್ಲಿ ವಸತಿ, ಸಂಚಾರ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ವಿವಿಧ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕಾಗಿದೆ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಮಾತನಾಡಿ, ಈ ಕ್ರೀಡಾಕೂಟಕ್ಕೆ ಜಿಲ್ಲಾಡಳಿತ ವತಿಯಿಂದ ಅಗತ್ಯ ನೆರವು ನೀಡಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಕ್ರೀಡಾಕೂಟ ಸಂಘಟಕರು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕರಾಟೆ ಕ್ರೀಡಾಕೂಟದ ಮಾಹಿತಿ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
ಸಭೆಯಲ್ಲಿ ಯುವಜನ ಸೇನೆ ಮತ್ತು ಕ್ರೀಡಾ ಉಪ ನಿರ್ದೇಶಕ ಪ್ರವೀಣ್ ಡಿಸೋಜಾ, ಸಹಾಯಕ ಪೊಲೀಸ್ ಆಯುಕ್ತ ನಜ್ಮಾ ಫಾರೂಕಿ, ಕರಾಟೆ ಸಂಘಟನೆಗಳ ಪದಾಧಿಕಾರಿಗಳಾದ ಸುರೇಂದ್ರ, ಸೂರಜ್ ಶೆಟ್ಟಿ, ರಾಜ್‌ಗೋಪಾಲ್ ರೈ, ಮತ್ತಿತರರು ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು