10:45 PM Friday2 - January 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ… ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ…

ಇತ್ತೀಚಿನ ಸುದ್ದಿ

ಮಂಗಳೂರು: ಸೆಪ್ಟೆಂಬರ್ 6ರಿಂದ 3 ದಿನಗಳ ಕಾಲ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾಟ

26/07/2024, 22:13

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ ಸೆಪ್ಟೆಂಬರ್ 6ರಿಂದ 8ರವರೆಗೆ ಆಯೋಜಿಸಲಾಗಿದೆ.ಈ ಕುರಿತು ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕರಾಟೆ ಕ್ರೀಡಾಕೂಟದ ಸಂಘಟಕ ಡಾ. ರಾಹುಲ್ ಟಿ. ಜಿ. ಸಭೆಯಲ್ಲಿ ಮಾತನಾಡಿ “ಶೌರ್ಯ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ -2024 ಪಂದ್ಯಾಟದಲ್ಲಿ ವಿವಿಧ ದೇಶಗಳ ಹಲವು ಖ್ಯಾತ ಕರಾಟೆ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಮಂಗಳೂರಿನ ಕೋರ್ಡಲ್ ಚರ್ಚ್ ಮೈದಾನದಲ್ಲಿ ಕ್ರೀಡಾಕೂಟ ನಡೆಯಲಿದೆ. ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ವಿವಿಧ ದೇಶಗಳಿಂದ ಈ ಪಂದ್ಯಾಟಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿದರು.
ವಿಶ್ವ ಕರಾಟೆ ಒಕ್ಕೂಟದ ನಿಯಮಾವಳಿಗಳಂತೆ ಪಂದ್ಯಾಟ ನಡೆಯಲಿದೆ ಅಂತಾರಾಷ್ಟ್ರೀಯ ರೆಫ್ರಿಗಳು ಸ್ಪರ್ಧೆಯನ್ನು ನಿರ್ವಹಿಸುವರು ಎಂದು ನುಡಿದರು.
ಅಂತಾರಾಷ್ಟ್ರೀಯ ಕರಾಟೆ ಕ್ರೀಡಾಕೂಟದ ಹಿನ್ನೆಲೆಯಲ್ಲಿ ವಸತಿ, ಸಂಚಾರ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ವಿವಿಧ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕಾಗಿದೆ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಮಾತನಾಡಿ, ಈ ಕ್ರೀಡಾಕೂಟಕ್ಕೆ ಜಿಲ್ಲಾಡಳಿತ ವತಿಯಿಂದ ಅಗತ್ಯ ನೆರವು ನೀಡಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಕ್ರೀಡಾಕೂಟ ಸಂಘಟಕರು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕರಾಟೆ ಕ್ರೀಡಾಕೂಟದ ಮಾಹಿತಿ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
ಸಭೆಯಲ್ಲಿ ಯುವಜನ ಸೇನೆ ಮತ್ತು ಕ್ರೀಡಾ ಉಪ ನಿರ್ದೇಶಕ ಪ್ರವೀಣ್ ಡಿಸೋಜಾ, ಸಹಾಯಕ ಪೊಲೀಸ್ ಆಯುಕ್ತ ನಜ್ಮಾ ಫಾರೂಕಿ, ಕರಾಟೆ ಸಂಘಟನೆಗಳ ಪದಾಧಿಕಾರಿಗಳಾದ ಸುರೇಂದ್ರ, ಸೂರಜ್ ಶೆಟ್ಟಿ, ರಾಜ್‌ಗೋಪಾಲ್ ರೈ, ಮತ್ತಿತರರು ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು