10:01 PM Monday29 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಮಂಗಳೂರು: ಸೆಪ್ಟೆಂಬರ್ 6ರಿಂದ 3 ದಿನಗಳ ಕಾಲ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾಟ

26/07/2024, 22:13

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ ಸೆಪ್ಟೆಂಬರ್ 6ರಿಂದ 8ರವರೆಗೆ ಆಯೋಜಿಸಲಾಗಿದೆ.ಈ ಕುರಿತು ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕರಾಟೆ ಕ್ರೀಡಾಕೂಟದ ಸಂಘಟಕ ಡಾ. ರಾಹುಲ್ ಟಿ. ಜಿ. ಸಭೆಯಲ್ಲಿ ಮಾತನಾಡಿ “ಶೌರ್ಯ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ -2024 ಪಂದ್ಯಾಟದಲ್ಲಿ ವಿವಿಧ ದೇಶಗಳ ಹಲವು ಖ್ಯಾತ ಕರಾಟೆ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಮಂಗಳೂರಿನ ಕೋರ್ಡಲ್ ಚರ್ಚ್ ಮೈದಾನದಲ್ಲಿ ಕ್ರೀಡಾಕೂಟ ನಡೆಯಲಿದೆ. ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ವಿವಿಧ ದೇಶಗಳಿಂದ ಈ ಪಂದ್ಯಾಟಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿದರು.
ವಿಶ್ವ ಕರಾಟೆ ಒಕ್ಕೂಟದ ನಿಯಮಾವಳಿಗಳಂತೆ ಪಂದ್ಯಾಟ ನಡೆಯಲಿದೆ ಅಂತಾರಾಷ್ಟ್ರೀಯ ರೆಫ್ರಿಗಳು ಸ್ಪರ್ಧೆಯನ್ನು ನಿರ್ವಹಿಸುವರು ಎಂದು ನುಡಿದರು.
ಅಂತಾರಾಷ್ಟ್ರೀಯ ಕರಾಟೆ ಕ್ರೀಡಾಕೂಟದ ಹಿನ್ನೆಲೆಯಲ್ಲಿ ವಸತಿ, ಸಂಚಾರ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ವಿವಿಧ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕಾಗಿದೆ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಮಾತನಾಡಿ, ಈ ಕ್ರೀಡಾಕೂಟಕ್ಕೆ ಜಿಲ್ಲಾಡಳಿತ ವತಿಯಿಂದ ಅಗತ್ಯ ನೆರವು ನೀಡಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಕ್ರೀಡಾಕೂಟ ಸಂಘಟಕರು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕರಾಟೆ ಕ್ರೀಡಾಕೂಟದ ಮಾಹಿತಿ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
ಸಭೆಯಲ್ಲಿ ಯುವಜನ ಸೇನೆ ಮತ್ತು ಕ್ರೀಡಾ ಉಪ ನಿರ್ದೇಶಕ ಪ್ರವೀಣ್ ಡಿಸೋಜಾ, ಸಹಾಯಕ ಪೊಲೀಸ್ ಆಯುಕ್ತ ನಜ್ಮಾ ಫಾರೂಕಿ, ಕರಾಟೆ ಸಂಘಟನೆಗಳ ಪದಾಧಿಕಾರಿಗಳಾದ ಸುರೇಂದ್ರ, ಸೂರಜ್ ಶೆಟ್ಟಿ, ರಾಜ್‌ಗೋಪಾಲ್ ರೈ, ಮತ್ತಿತರರು ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು