1:11 PM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಮಂಗಳೂರು: ಸೆಪ್ಟೆಂಬರ್ 6ರಿಂದ 3 ದಿನಗಳ ಕಾಲ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾಟ

26/07/2024, 22:13

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ ಸೆಪ್ಟೆಂಬರ್ 6ರಿಂದ 8ರವರೆಗೆ ಆಯೋಜಿಸಲಾಗಿದೆ.ಈ ಕುರಿತು ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕರಾಟೆ ಕ್ರೀಡಾಕೂಟದ ಸಂಘಟಕ ಡಾ. ರಾಹುಲ್ ಟಿ. ಜಿ. ಸಭೆಯಲ್ಲಿ ಮಾತನಾಡಿ “ಶೌರ್ಯ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ -2024 ಪಂದ್ಯಾಟದಲ್ಲಿ ವಿವಿಧ ದೇಶಗಳ ಹಲವು ಖ್ಯಾತ ಕರಾಟೆ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಮಂಗಳೂರಿನ ಕೋರ್ಡಲ್ ಚರ್ಚ್ ಮೈದಾನದಲ್ಲಿ ಕ್ರೀಡಾಕೂಟ ನಡೆಯಲಿದೆ. ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ವಿವಿಧ ದೇಶಗಳಿಂದ ಈ ಪಂದ್ಯಾಟಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿದರು.
ವಿಶ್ವ ಕರಾಟೆ ಒಕ್ಕೂಟದ ನಿಯಮಾವಳಿಗಳಂತೆ ಪಂದ್ಯಾಟ ನಡೆಯಲಿದೆ ಅಂತಾರಾಷ್ಟ್ರೀಯ ರೆಫ್ರಿಗಳು ಸ್ಪರ್ಧೆಯನ್ನು ನಿರ್ವಹಿಸುವರು ಎಂದು ನುಡಿದರು.
ಅಂತಾರಾಷ್ಟ್ರೀಯ ಕರಾಟೆ ಕ್ರೀಡಾಕೂಟದ ಹಿನ್ನೆಲೆಯಲ್ಲಿ ವಸತಿ, ಸಂಚಾರ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ವಿವಿಧ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕಾಗಿದೆ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಮಾತನಾಡಿ, ಈ ಕ್ರೀಡಾಕೂಟಕ್ಕೆ ಜಿಲ್ಲಾಡಳಿತ ವತಿಯಿಂದ ಅಗತ್ಯ ನೆರವು ನೀಡಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಕ್ರೀಡಾಕೂಟ ಸಂಘಟಕರು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕರಾಟೆ ಕ್ರೀಡಾಕೂಟದ ಮಾಹಿತಿ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
ಸಭೆಯಲ್ಲಿ ಯುವಜನ ಸೇನೆ ಮತ್ತು ಕ್ರೀಡಾ ಉಪ ನಿರ್ದೇಶಕ ಪ್ರವೀಣ್ ಡಿಸೋಜಾ, ಸಹಾಯಕ ಪೊಲೀಸ್ ಆಯುಕ್ತ ನಜ್ಮಾ ಫಾರೂಕಿ, ಕರಾಟೆ ಸಂಘಟನೆಗಳ ಪದಾಧಿಕಾರಿಗಳಾದ ಸುರೇಂದ್ರ, ಸೂರಜ್ ಶೆಟ್ಟಿ, ರಾಜ್‌ಗೋಪಾಲ್ ರೈ, ಮತ್ತಿತರರು ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು