8:46 AM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

Mangaluru | ಅಹಲ್ಯಾ ವೆಂಕಟ್ ರಾಜ್, ಪದ್ಮನಯನಾ ಶಿಕ್ಷಕಿಯರಿಗೆ ಶಿವಳ್ಳಿ ಸ್ಪಂದನ ಸನ್ಮಾನ

07/09/2025, 20:38

ಮಂಗಳೂರು(reporterkarnataka.com): ಶಿವಳ್ಳಿ ಸ್ಪಂದನ ಕದ್ರಿವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕಿಯರಾದ ಅಹಲ್ಯಾ ವೆಂಕಟರಾಜ್ ಮತ್ತು ಪದ್ಮನಯನಾ ಸಂಪತ್ ಕುಮಾರ್ ಅವರನ್ನು ಅವರ ಮನೆಯಲ್ಲಿ ಸನ್ಮಾನಿಸಲಾಯಿತು.

ಮಂಗಳೂರು ಶಿವಳ್ಳಿ ಸ್ಪಂದನ ಉಪಾಧ್ಯಕ್ಷ ರಾಮಚಂದ್ರ ಭಟ್ ಎಲ್ಲೂರು, ದ.ಕ. ಜಿಲ್ಲಾ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಶಿವಳ್ಳಿ ಸ್ಪಂದನ ಮಹಿಳಾ ಘಟಕದ ಅಧ್ಯಕ್ಷೆ ರಮಾಮಣಿ, ಶಿವಳ್ಳಿ ಸ್ಪಂದನ ಕದ್ರಿವಲಯದ ಕಾರ್ಯದರ್ಶಿ ಶೀಲಾ ಜಯಪ್ರಕಾಶ, ಜೊತೆ ಕಾರ್ಯದರ್ಶಿ ವನಿತಾ ಎಲ್ಲೂರು, ಕೋಶಾಧಿಕಾರಿ ರವಿಕಾಂತ ಭಟ್, ಕಾರ್ಯಕಾರಿ ಸಮಿತಿಯ ಸದಸ್ಯ ಸದಾನಂದ ರಾವ್ ಪೇಜಾವರ ಉಪಸ್ಥಿತರಿದ್ದರು.

*ಅಹಲ್ಯಾ ವೆಂಕಟರಾಜ್:*
ಕೊಯಮತ್ತೂರಿನಲ್ಲಿ ಹುಟ್ಟಿ ಬೆಳೆದು, ಮದ್ರಾಸ್ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಎಂಫಿಲ್ ಶಿಕ್ಷಣ ಪಡೆದರು. ಕೊಯಮತ್ತೂರು ಮತ್ತು ಚೆನ್ನೈನ ಮಹಿಳಾ ಕಾಲೇಜಿನಲ್ಲಿ ಭೌತಶಾಸ್ತ್ರ ಅಧ್ಯಾಪಕಿಯಾಗಿ ಸುಮಾರು 20 ವರ್ಷಗಳ ಸೇವಾ ಅನುಭವ ಪಡೆದವರು. ಪತಿಯ ವರ್ಗಾವಣೆಯಿಂದಾಗಿ ಅವರು ಮಂಗಳೂರಿಗೆ ಆಗಮಿದರು. ಆರಂಭದಲ್ಲಿ ಒಂದು ವರ್ಷ ಅವರು ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದರು, ಅಲ್ಲಿ ಕೆಲಸ ಮಾಡುತ್ತಲೇ ಕಂಪ್ಯೂಟರ್ ವಿಜ್ಞಾನದಲ್ಲಿ ಪಿಜಿಡಿಸಿಎ ಪಡೆದರು. ಮುಂದಿನ ವರ್ಷ ಅವರು ಸೇಂಟ್ ಆಗ್ನೆಸ್ ಕಾಲೇಜಿನಲ್ಲಿ ಕಂಪ್ಯೂಟರ್ ವಿಜ್ಞಾನ ವಿಭಾಗದಲ್ಲಿ ಸೇವೆ ಸಲ್ಲಿಸಿದರು. 2014 ರಲ್ಲಿ ಅವರು ಅಸೋಸಿಯೇಟ್ ಪ್ರೊಫೆಸರ್ ಮತ್ತು ಕಂಪ್ಯೂಟರ್ ಸೈನ್ಸ್ ಮುಖ್ಯಸ್ಥರಾಗಿ ನಿವೃತ್ತರಾದರು.
1983ರಲ್ಲಿ ಅವರು ಕರ್ನಾಟಕ ಬ್ಯಾಂಕಿನ ಎಜಿಎಂ ಎನ್. ವೆಂಕಟ್ರಾಜ್ ಅವರೊಂದಿಗೆ ಸಂತೋಷದ ದಾಂಪತ್ಯ ಜೀವನವನ್ನು ಪ್ರವೇಶಿಸಿದರು. ಪ್ರಸ್ತುತ ಒಬ್ಬ ಗಂಡು ಮಗ, ಸೊಸೆ ಮತ್ತು ಇಬ್ಬರು ಮೊಮ್ಮಕ್ಕಳು ಇದ್ದಾರೆ.

*ಪದ್ಮನಯನಾ:* ಇವರು ಪಡುಬಿದ್ರಿಯ ಶಾಂತಾ ಮತ್ತು ಪಾರ್ಥಸಾರಥಿ ರಾವ್ ದಂಪತಿ ಪುತ್ರಿ. ಸಂಪತ್ ಕುಮಾರ್ ಬೆಳ್ಮಣ್ ಅವರ ಪತ್ನಿ. ಇವರು ಬಿ.ಇ. ಎಂ.ಟೆಕ್ ಸ್ನಾತಕೋತ್ತರ ಪದವೀಧರೆ. ಕಂಪ್ಯೂಟರ್ ಸಾಯನ್ಸ್ ಮತ್ತು ಇಂಜಿನಿಯರಿಂಗ್ ನಲ್ಲಿ ಪಿ.ಎಚ್.ಡಿ. ಪಡೆದಿದ್ದಾರೆ.
ಇವರು ಮುಂಬೈ ಟಾಕೂರ್ ಇಂಜಿನಿಯರಿಂಗ್ ಕಾಲೇಜ್ 10 ವರ್ಷಗಳ ಕಾಲ ಉಪನ್ಯಾಸಕಿಯಾಗಿ ಸೇವೆಯನ್ನು ಸಲ್ಲಿಸಿ, ಬಳಿಕ ಮಂಗಳೂರು ಶ್ರೀನಿವಾಸ ಇನ್ಸ್ ಟ್ಯೂಟ್ ಆಫ್ ಟೆಕ್ನಾಲಜಿಯ ಲ್ಲಿ 18 ವರ್ಷ ಗಳ ಸೇವಾ ಅನುಭವ. ಪ್ರಸ್ತುತ ಮಂಗಳೂರಿನ ಎ.ಜೆ.ಇನ್ಸ್ ಟ್ಯೂಟ್ ಆಫ್ ಇಂಜನಿಯರಿಂಗ್ ಎಂಡ್ ಟೆಕ್ನಾಲಜಿ ಸಂಸ್ಥೆಯಲ್ಲಿ ಆರ್ಟಿಫಿಷಿಯಲ್ ಇಂಟಲಿಜನ್ಸ್ ಮತ್ತು ಡಾಟಾ ಸೈನ್ಸ್ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ ಆದಿತ್ಯ
ಮತ್ತು ಅರ್ಜುನ್ ಎಂಬ ಇಬ್ಬರು ಗಂಡು ಮಕ್ಕಳು.
ಇಬ್ಬರು ಪ್ರತಿಭಾನ್ವಿತ ಶಿಕ್ಷಕರು ಶಿವಳ್ಳಿ ಸ್ಪಂದನ ಕದ್ರಿವಲಯದ ಹೆಮ್ಮೆ.

ಇತ್ತೀಚಿನ ಸುದ್ದಿ

ಜಾಹೀರಾತು