10:26 PM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ… ಇಂಗಾಲಮುಕ್ತ ಸರಕು ಸಾಗಣೆ ಪ್ರಧಾನಿ ಮೋದಿ ಅವರ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮಂಗಳೂರು ಶೂಟ್ ಔಟ್: ಅಪ್ಪ ಹಾರಿಸಿದ ಗುಂಡು ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ಪುತ್ರ ಸಾವು

06/10/2021, 19:04

ಮಂಗಳೂರು(reporterkarnataka.com) : ನಗರದ ಮೋರ್ಗನ್ ಗೇಟ್ ನ ವೈಷ್ಣವಿ ಎಕ್ಸ್ ಪ್ರೆ ಸ್ ಕಾರ್ಗೋ ಪ್ರೈ.ಲಿ. ಸಂಸ್ಥೆಯ ಮಾಲೀಕ ರಾಜೇಶ್ ಪ್ರಭು ತನ್ನ ಕೆಲಸದವರಿಗೆ ಹಾರಿಸಿದ ಗುಂಡು ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ಅವರ ಪುತ್ರ ಚಿಕಿತ್ಸೆ ಫಲಕಾರಿಯಾಗದೆ ಇಂದು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಮಂಗಳವಾರ ಸಂಬಳ ಕೇಳಲು ಬಂದಿದ್ದ ನೌಕರರ ಮೇಲೆ ಸಿಟ್ಟಿಗೆದ್ದ ರಾಜೇಶ್ ಪ್ರಭು ತನ್ನ ಬಳಿ ಇದ್ದ ಪಿಸ್ತೂಲ್ ತೆಗೆದು ಗುಂಡು ಹಾರಿಸಿದ್ದರು. ಅದು ತಪ್ಪಿ ಅವರ 16ರ ಹರೆಯದ ಪುತ್ರ ಸುಧೀಂದ್ರನ ತಲೆಗೆ ಬಿದ್ದಿತ್ತು. ಕಣ್ಣಿನೊಳಗಿನಿಂದ ಪ್ರವೇಶಿಸಿದ ಗುಂಡು ಮೆದುಳು ಹೊಕ್ಕಿತ್ತು. ಬಾಲಕನನ್ನು ತಕ್ಷಣ ಖಾಸಗಿ ಆಸ್ಪತ್ರೆಯೊಂದಕ್ಕೆ ಸೇರಿಸಿ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಬಾಲಕ ಇಂದು ಮೃತಪಟ್ಟಿದ್ದಾನೆ. ಆರೋಪಿ ತಂದೆ ರಾಜೇಶ್ ಪ್ರಭು ಅವರನ್ನು ಬಂಧಿಸಲಾಗಿದೆ.

ನಗರದ ಪಾಂಡೇಶ್ವರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದರು. ಪೊಲೀಸ್ ಕಮಿಷನರ್ ಶಶಿಕುಮಾರ್ ಕೂಡ ಸ್ಥಳಕ್ಕೆ ಆಗಮಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು