10:25 PM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ… ಇಂಗಾಲಮುಕ್ತ ಸರಕು ಸಾಗಣೆ ಪ್ರಧಾನಿ ಮೋದಿ ಅವರ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮಂಗಳೂರು: ಶ್ರೀ ವೀರವೆಂಕಟೇಶ ದೇವರ ಪಾಕ ಶಾಲೆ ನವೀಕೃತ ‘ಅನ್ನಪೂರ್ಣೆ’ ಉದ್ಘಾಟನೆ        

13/12/2021, 20:26

ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com) : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ನವೀಕೃತ ಅನ್ನಪೂರ್ಣೆ ( ಪಾಕ ಶಾಲೆ ) ಯ ಉದ್ಘಾಟನಾ ಸಮಾರಂಭ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರಿಂದ ನೆರವೇರಿತು.

ಪ್ರಾರಂಭದಲ್ಲಿ ಶ್ರೀಗಳವರು ಬಂಟ್ವಾಳ ಮೊಕ್ಕಾಂ ನಿಂದ ಆಗಮಿಸಿದ್ದು, ಶ್ರೀಗಳವರಿಗೆ ಮಂಗಳೂರು ಪೇಟೆಯ ವತಿಯಿಂದ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಶ್ರೀಗಳವರಿಂದ ಶ್ರೀ ವೀರ ವೆಂಕಟೇಶ ದೇವರ ಸನ್ನಿಧಿಯಲ್ಲಿ ಮಹಾ ಪ್ರಾರ್ಥನೆ ನಡೆಯಿತು. ಇದೇ ಸಂದರ್ಭದಲ್ಲಿ ಬಳಿಕ ಬರುವ ವರ್ಷ ಜನವರಿ ೨೫ ರಂದು ನಡೆಯಲಿರುವ ಶ್ರೀ ದೇವರ ಪುನಃ ಪ್ರತಿಷ್ಠಾ ದಶಮಾನೋತ್ಸವ ಹಾಗೂ ನೂತನ ಬ್ರಹ್ಮ ರಥ ಸಮರ್ಪಣೆ ನಡೆಯಲಿರುವುದರಿಂದ ಶ್ರೀಗಳವರಿಂದ ಪ್ರಾರ್ಥನೆ ನಡೆದು ಪ್ರಸಾದ ನೀಡಿದರು. ನಂತರ ನವೀಕೃತ ಅನ್ನಪೂರ್ಣೆ ( ಪಾಕ ಶಾಲೆ )ಯ ಉದ್ಘಾಟನಾ ಸಮಾರಂಭ ಶ್ರೀಗಳವರಿಂದ ದೀಪ ಪ್ರಜ್ವಲನೆಯ ಮುಖೇನ ವಿಧ್ಯುಕ್ತವಾಗಿ ಉದ್ಘಾಟನೆಗೊಂಡಿತು . ಈ ಸಂದರ್ಭದಲ್ಲಿ ದೇವಳದ ಮೊಕ್ತೇಸರರಾದ ಸಿ ಎಲ್ ಶೆಣೈ , ಕೆ ಪಿ ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ , ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯ , ಕೊಡುಗೈ ದಾನಿ ರಾಮದಾಸ್ ಕಾಮತ್ , ವೆಂಕಟೇಶ್ ಪೈ ಹಾಗೂ ಸಾವಿರಾರು ಭಜಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು