4:44 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Mangaluru | ಕೊಟ್ಟಾರಚೌಕಿ ರಾಷ್ಟ್ರೀಯ ಹೆದ್ದಾರಿ ಬಳಿ ಸಿಂಧೂರ ವಿಜಯ ಪಾರ್ಕ್ ಉದ್ಘಾಟನೆ

05/07/2025, 21:50

ಮಂಗಳೂರು(reporterkarnataka.com): ನಗರದ ಕೊಟ್ಟಾರಚೌಕಿ ಹೆದ್ದಾರಿ 66ರ ಬಳಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ನಿರ್ಮಾಣಗೊಂಡಿರುವ ನೂತನ ಸಿಂಧೂರ ವಿಜಯ
ಉದ್ಯಾನವನದ ಉದ್ಘಾಟನೆ ಶನಿವಾರ ನಡೆಯಿತು.


ಶಾಸಕ ಡಾ. ಭರತ್ ಶೆಟ್ಟಿ ವೈ. ಅಧ್ಯಕ್ಷತೆಯಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು 42. 35 ಲಕ್ಷ ರೂಪಾಯಿ ವೆಚ್ಚದಲ್ಲಿ ಸೈನಿಕರನ್ನು ಸ್ಮರಿಸುವ ಪಾರ್ಕ್ ನಿರ್ಮಾಣಗೊಂಡಿದೆ. ಶಾಸಕರಾದ ಡಾ. ಭರತ್ ಶೆಟ್ಟಿ ವೈ ಅವರು ತಮ್ಮ ಕ್ಷೇತ್ರದಾದ್ಯಂತ ಅತ್ಯುತ್ತಮವಾದ ಅಭಿವೃದ್ಧಿ ಕಾರ್ಯಗಳನ್ನು ನಡೆಸುತ್ತಾ ಬರುತ್ತಿದ್ದು ಈ ಯೋಜನೆಯನ್ನು ಕೂಡ ಕಾರ್ಯಗತಗೊಳಿಸುವಲ್ಲಿ ಶ್ರಮಿಸಿದ್ದಾರೆ. ಮುಡಾದ ಸದಸ್ಯರು ಅಧಿಕಾರಿಗಳು ಪಾಲಿಕೆಯ ಸದಸ್ಯರು ಅಧಿಕಾರಿಗಳ ಸಮನ್ವಯದೊಂದಿಗೆ ಉತ್ತಮವಾಗಿ ನಿರ್ಮಾಣಗೊಂಡಿದೆ ಎಂದು ಶ್ಲಾಘಿಸಿದರು.
ಶಾಸಕ ಡಾ. ಭರತ್ ಶೆಟ್ಟಿ ಮಾತನಾಡಿ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೊಟ್ಟಾರ ಚೌಕಿಯಲ್ಲಿ ಮೊದಲ ಅವಧಿಯಲ್ಲಿ ಗುದ್ದಲಿ ಪೂಜೆಯನ್ನು ನೆರವೇರಿಸಿದ್ದೆವು.
ಸ್ಥಳೀಯ ಕಾರ್ಪೊರೇಟರ್, ಸಾರ್ವಜನಿಕರು ಇಲ್ಲಿನ ಜಂಕ್ಷನ್ ನಲ್ಲಿ ಸೈನಿಕರ ಸ್ಮಾರಕವನ್ನ ನಿರ್ಮಿಸುವ ಬಗ್ಗೆ ಬೇಡಿಕೆಯನ್ನು ಇಟ್ಟಿದ್ದರು.ವಸೈನಿಕರ ತ್ಯಾಗ ಬಲಿದಾನವನ್ನು ಸದಾ ಸ್ಫರಿಸಿಕೊಳ್ಳುವ ನಿಟ್ಟಿನಲ್ಲಿ, ಅವರು ದೇಶದ ರಕ್ಷಣೆಗಾಗಿ ತಮ್ಮ ಕುಟುಂಬವನ್ನು ತೊರೆದು ಗಾಡಿ ಭಾಗದಲ್ಲಿ ಇದ್ದುಕೊಂಡು ದೇಶದ ಜನತೆ ಸುರಕ್ಷತೆಯಿಂದ ಜೀವನ ನಡೆಸಲು ತ್ಯಾಗವನ್ನೇ ಮಾಡುತ್ತಿದ್ದಾರೆ. ಹೀಗಾಗಿ ಈ ಉದ್ಯಾನವನ ನಿರ್ಮಾಣದಲ್ಲಿ ನಮಗೂ ಸಂತೃಪ್ತಿಯನ್ನು ಉಂಟುಮಾಡಿದೆ ಎಂದರು.
ನಗರ ಪ್ರವೇಶಿಸುವ ಜಂಕ್ಷನ್ ನಲ್ಲಿ ಈ ಉದ್ಯಾನವನ ನಿರ್ಮಾಣಗೊಂಡಿರುವುದರಿಂದ ಹೆಚ್ಚು ಆಕರ್ಷಣೀಯವಾಗಿದೆ.
ಈ ಒಂದು ಪಾರ್ಕನ್ನು ಸೈನಿಕರಿಗೆ ಹಾಗೂ ಅವರ ಕುಟುಂಬಗಳಿಗೆ ಅರ್ಪಿಸುವುದರ ಜೊತೆಗೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಸದಸ್ಯರು ಅಧಿಕಾರಿಗಳಿಗೆ ಈ ಸಂದರ್ಭ ಶ್ಲಾಘನೆಯನ್ನ ವ್ಯಕ್ತಪಡಿಸುತ್ತೇನೆ ಎಂದರು.
ಭಾರತವು ಪಾಕಿಸ್ತಾನದ ಉಗ್ರರ ಮೇಲಿನ ಕಾರ್ಯಾಚರಣೆಯ ಸಂದರ್ಭ ಜಯವನ್ನು ಪಡೆದಿರುವುದರ ಸೈನಿಕರ ಶೌರ್ಯದ ಕುರಿತಾಗಿ ಸಿಂಧೂರ ಕಾರ್ಯಾಚರಣೆ ಸದಾ ನೆನಪಿನಲ್ಲಿ ಉಳಿಯುವಂತಾಗಲು ಸಿಂಧೂರ ವಿಜಯ ಹೆಸರನ್ನ ನಾಮಕರಣ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಪ್ರಾಧಿಕಾರದ ಸದಸ್ಯರಾದ ನೀರಾಜ್ ಚಂದ್ರ ಪಾಲ್
ಅಬ್ದುಲ್ ಜಲೀಲ್, ಸುಮನ್ ದಾಸ್, ಸಬಿತಾ ಮಿಸ್ಕಿತ್,
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಮೊಹಮ್ಮದ್ ನಜೀರ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಅಶ್ವಿನಿ, ಸಹಾಯಕ ಅಭಿಯಂತರರಾದ ಅಕ್ಬರ್ ಭಾಷಾ, ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯರಾದ ಮನೋಜ್ ಕುಮಾರ್ ಕಿರಣ್ ಕುಮಾರ್ ಕೊಡಿಕಲ್, ರಂಜಿನಿ ಕೋಟ್ಯಾನ್, ಬಿಜೆಪಿ ಮುಖಂಡರಾದ ಸಿತೇಶ್ ಕೊಂಡೆ, ಆಶಿತ್ ನೋಂಡ, ಹರಿಪ್ರಸಾದ್ ಶೆಟ್ಟಿ, ಉಮೇಶ್ ಮಾಲರಾಯಸಾನ, ಸಂಜಿತ್ ಶೆಟ್ಟಿ, ರಮೇಶ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು