3:31 PM Thursday18 - June 2026
ಬ್ರೇಕಿಂಗ್ ನ್ಯೂಸ್
ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ…

ಇತ್ತೀಚಿನ ಸುದ್ದಿ

ಮಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ 20ರಂದು ಪಾದಯಾತ್ರೆ,‌ ಬೃಹತ್ ಪ್ರತಿಭಟನೆ

18/08/2023, 23:17

ಮಂಗಳೂರು(reporterkarnataka.com): ಧರ್ಮಸ್ಥಳದ ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ, ಸೌಜನ್ಯ ಕುಟುಂಬಕ್ಕೆ ನ್ಯಾಯ ಒದಗಿಸಲು ಒತ್ತಾಯಿಸಿ ಸೌಜನ್ಯ ಹೋರಾಟ ಸಮಿತಿಯ ನೇತೃತ್ವದಲ್ಲಿ
ಇದೇ 20 ರಂದು ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಸೌಜನ್ಯ ಹೋರಾಟ ಸಮಿತಿ ಸಂಚಾಲಕಿ ಪ್ರಸನ್ನ ರವಿ ಹೇಳಿದರು.
ಅವರು ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಧ್ಯಾಹ್ನ 3.30ಕ್ಕೆ ನಗರದ ಕದ್ರಿ ಮಂಜುನಾಥ ದೇವಸ್ಥಾನದಿಂದ ಕದ್ರಿ ಬಯಲು ರಂಗ ಮಂದಿರದವರಿಗೆ ಪಾದಯಾತ್ರೆ ನಡೆಯಲಿದೆ. ಸಂಜೆ 4 ಗಂಟೆಗೆ ಕದ್ರಿ ಮೈದಾನದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. ಸೌಜನ್ಯ ಕುಟುಂಬದ ಪರವಾಗಿ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ಅವರ ತಾಯಿ ಕುಸುಮಾವತಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸೌಜನ್ಯಳ ಕೊಲೆ ನಡೆದು 11 ವರ್ಷಗಳು ಆಗಿವೆ. ಆದರೆ ಇದರ ಹಿಂದಿರುವ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ನಮ್ಮ ಕಾನೂನು ವ್ಯವಸ್ಥೆಗೆ ಸಾಧ್ಯವಾಗಿಲ್ಲ. ಸಂತೋಷ್ ರಾವ್ ಆರೋಪಿಯಲ್ಲ ಎಂದು ನ್ಯಾಯಾಲಯ ಹೇಳಿರುವುದರಿಂದ ನೈಜ ಅಪರಾಗಳಿಗೆ ಶಿಕ್ಷೆ ಸಿಗಬೇಕು. ಸೌಜನ್ಯ ಅವರ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಮಂಗಳೂರಿನ ಜನತೆ ಕೈಜೋಡಿಸಬೇಕು. ಪ್ರತಿಭಟನೆಯಲ್ಲಿ ಸ್ವಯಂಪ್ರೇರಿತರಾಗಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಹೋರಾಟ ಸಮಿತಿ ಸದಸ್ಯರಾದ ವಿಖ್ಯಾತ್ ಉಳ್ಳಾಲ್, ಶಶಿಕಲಾ ಶೆಟ್ಟಿ, ಸಾಜನ್ ಶೆಟ್ಟಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು