10:15 PM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಮಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ 20ರಂದು ಪಾದಯಾತ್ರೆ,‌ ಬೃಹತ್ ಪ್ರತಿಭಟನೆ

18/08/2023, 23:17

ಮಂಗಳೂರು(reporterkarnataka.com): ಧರ್ಮಸ್ಥಳದ ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ, ಸೌಜನ್ಯ ಕುಟುಂಬಕ್ಕೆ ನ್ಯಾಯ ಒದಗಿಸಲು ಒತ್ತಾಯಿಸಿ ಸೌಜನ್ಯ ಹೋರಾಟ ಸಮಿತಿಯ ನೇತೃತ್ವದಲ್ಲಿ
ಇದೇ 20 ರಂದು ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಸೌಜನ್ಯ ಹೋರಾಟ ಸಮಿತಿ ಸಂಚಾಲಕಿ ಪ್ರಸನ್ನ ರವಿ ಹೇಳಿದರು.
ಅವರು ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಧ್ಯಾಹ್ನ 3.30ಕ್ಕೆ ನಗರದ ಕದ್ರಿ ಮಂಜುನಾಥ ದೇವಸ್ಥಾನದಿಂದ ಕದ್ರಿ ಬಯಲು ರಂಗ ಮಂದಿರದವರಿಗೆ ಪಾದಯಾತ್ರೆ ನಡೆಯಲಿದೆ. ಸಂಜೆ 4 ಗಂಟೆಗೆ ಕದ್ರಿ ಮೈದಾನದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. ಸೌಜನ್ಯ ಕುಟುಂಬದ ಪರವಾಗಿ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ಅವರ ತಾಯಿ ಕುಸುಮಾವತಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸೌಜನ್ಯಳ ಕೊಲೆ ನಡೆದು 11 ವರ್ಷಗಳು ಆಗಿವೆ. ಆದರೆ ಇದರ ಹಿಂದಿರುವ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ನಮ್ಮ ಕಾನೂನು ವ್ಯವಸ್ಥೆಗೆ ಸಾಧ್ಯವಾಗಿಲ್ಲ. ಸಂತೋಷ್ ರಾವ್ ಆರೋಪಿಯಲ್ಲ ಎಂದು ನ್ಯಾಯಾಲಯ ಹೇಳಿರುವುದರಿಂದ ನೈಜ ಅಪರಾಗಳಿಗೆ ಶಿಕ್ಷೆ ಸಿಗಬೇಕು. ಸೌಜನ್ಯ ಅವರ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಮಂಗಳೂರಿನ ಜನತೆ ಕೈಜೋಡಿಸಬೇಕು. ಪ್ರತಿಭಟನೆಯಲ್ಲಿ ಸ್ವಯಂಪ್ರೇರಿತರಾಗಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಹೋರಾಟ ಸಮಿತಿ ಸದಸ್ಯರಾದ ವಿಖ್ಯಾತ್ ಉಳ್ಳಾಲ್, ಶಶಿಕಲಾ ಶೆಟ್ಟಿ, ಸಾಜನ್ ಶೆಟ್ಟಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು