11:39 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Mangaluru | ಕ್ರೈಸ್ತರಿಂದ ಚರ್ಚ್ ಮತ್ತು ಸಿಮೆಟರಿ ಗಳಲ್ಲಿ ವಿಶೇಷ ಪ್ರಾರ್ಥನೆ

02/11/2025, 20:05

ಮಂಗಳೂರು(reporterkarnataka.com): ಕ್ರೈಸ್ತರು ನವೆಂಬರ್ 2ರಂದು ತಮ್ಮ ಕುಟುಂಬಗಳ ಮೃತ ಸದಸ್ಯರನ್ನು ಸ್ಮರಿಸಿ ಅವರ ಆತ್ಮಗಳಿಗೆ ಸದ್ಗತಿ ಲಭಿಸಲು ದೇವರ ಕರುಣೆ ಮತ್ತು ಅನುಗ್ರಹ ಕೋರಿ ಚರ್ಚ್ ಹಾಗೂ ಸಿಮೆಟರಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮಂಗಳೂರಿನ ಕುಲಶೇಖರ, ಪಾಲ್ದನೆ ಮತ್ತು ಶಕ್ತಿನಗರ ಚರ್ಚ್ ಗಳಿಗೆ ಕುಲಶೇಖರ ಚರ್ಚ್ ಸಿಮೆಟರಿಯೇ ಅಧಿಕೃತ ಸಿಮೆಟರಿ ಆಗಿದ್ದು,ಇಂದು ಈ ಮೂರು ಚರ್ಚ್ ಗಳ ಕ್ರೈಸ್ತರು ಕುಲಶೇಖರ ಚರ್ಚ್ ಗೆ ತೆರಳಿ ಅಲ್ಲಿನ ಸಿಮೆಟರಿಯಲ್ಲಿ ವಿಶೇಷ ಪ್ರಾರ್ಥನೆ ನಡೆಸಿದರು.

ಕುಲಶೇಖರ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ಕ್ಲಿಫರ್ಡ್ ಫೆರ್ನಾಂಡಿಸ್ ಮತ್ತು ಪಾಲ್ದನೆ ಸಂತ ತೆರೆಸಾ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರ ನೇತೃತ್ವದಲ್ಲಿ ಪ್ರಾರ್ಥನೆ ನೆರವೇರಿತು. ಪವಿತ್ರ ಜಲ ಸಿಂಪರಣೆ ಮಾಡಿ ಸಮಾಧಿಗಳನ್ನು ಆಶೀರ್ವದಿಸಿದರು. ಸಮಾಧಿ ಸ್ಥಳವನ್ನು ಸ್ವಚ್ಛಗೊಳಿಸಿ ಮೇಣದ ಬತ್ತಿಗಳನ್ನು ಉರಿಸಿ ಪ್ರಾರ್ಥನೆಗೆ ಅಣಿಗೊಳಿಸಲಾಗಿತ್ತು.
ಇದೇ ಸಂದರ್ಭದಲ್ಲಿ ಕುಲಶೇಖರ ಚರ್ಚ್ ನ ಸಿಮೆಟರಿಯಲ್ಲಿ ನೂತನವಾಗಿ ಸ್ಥಾಪಿಸಿದ ಪವಿತ್ರ ಶಿಲುಬೆಯ ಆಶೀರ್ವಾದ ಕೂಡಾ ನೆರವೇರಿತು. ಮೂರೂ ಚರ್ಚ್ ಗಳ ಕ್ರೈಸ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು