2:39 AM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ ರಚನೆ

13/06/2025, 18:14

ಮಂಗಳೂರು(reporterkarnata.com):ಕೋಮು ದಳ್ಳುರಿಗೆ ಬೆಂದು ಹೋಗಿರುವ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಮಲೆನಾಡು ಪ್ರದೇಶಗಳಿಗೆ ಸಾಂತ್ವಾನ ಹೇಳುವ ನಿಟ್ಟಿನಲ್ಲಿ ಅಸ್ತಿತ್ವಕ್ಕೆ ಬಂದ ವಿಶೇಷ ಕಾರ್ಯಪಡೆಗೆ ಶುಕ್ರವಾರ ಅಧಿಕೃತ ಚಾಲನೆ ನೀಡಲಾಯಿತು.


ಕರಾವಳಿ ಹಾಗೂ ಮಲೆನಾಡಿನ ಶಿವಮೊಗ್ಗ ಜಿಲ್ಲೆಗಳಲ್ಲಿ ಪದೇ ಪದೇ ತಲೆ ಎತ್ತುತ್ತಿರುವ ಕೋಮು ಸಂಘರ್ಷ, ಕೋಮು ಆಧಾರಿತ ಹತ್ಯೆಗಳನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರಕಾರ ವಿಶೇಷ ಕಾರ್ಯಪಡೆಯನ್ನು ರಚಿಸಿದೆ. ಈ ಕಾರ್ಯಪಡೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಂಗಳೂರಿನಲ್ಲಿ ಚಾಲನೆ ನೀಡಿದ್ದಾರೆ. ಕೋಮು ನಿಗ್ರಹ ಕಾರ್ಯಪಡೆಯು ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲಿದೆ.
ಈ ವಿಶೇಷ ಕಾರ್ಯಪಡೆಯ ಕೇಂದ್ರ ಕಚೇರಿ ಮಂಗಳೂರಿನಲ್ಲಿ ಇರಲಿದೆ.

*ಪಡೆಯಲ್ಲಿ ಯಾರಿದ್ದಾರೆ?:*
ಸ್ಪೆಷಲ್ ಆಕ್ಷನ್ ಫೋರ್ಸ್ (ಎಸ್‌ಎಎಫ್)ಗೆ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಯಲ್ಲಿದ್ದ ಸಿಬಂದಿಯನ್ನೇ ನಿಯೋಜಿಸಲಾಗಿದೆ. ಡಿಐಜಿ ದರ್ಜೆಯ ಅಧಿಕಾರಿಯೊಬ್ಬರು ಇದರ ಮುಖ್ಯಸ್ಥರು. ಸದ್ಯಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರೇ ಹೆಚ್ಚುವರಿಯಾಗಿ ನೇತೃತ್ವ ವಹಿಸಲಿದ್ದಾರೆ. ಎಎನ್‌ಎಫ್ ಪಡೆಯಿಂದ ಎರವಲು ಪಡೆದ 248 ಸಿಬ್ಬಂದಿಯನ್ನು ಹೊಸ ಕಾರ್ಯಪಡೆಗೆ ನಿಯೋಜನೆ ಮಾಡಲಾಗಿದ್ದು, ಇವನ್ನು ಮೂರು ತುಕಡಿಗಳಾಗಿ ವಿಭಜಿಸಲಾಗಿದೆ. ಪ್ರತಿ ತುಕಡಿಯಲ್ಲಿ ತಲಾ 78 ಸಿಬ್ಬಂದಿ ಇರಲಿದ್ದಾರೆ.

*ಎಲ್ಲೆಲ್ಲ ಕಾರ್ಯನಿರ್ವಹಿಸಲಿ?:*
ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಈ ಕಾರ್ಯಪಡೆಯು ವಿಶೇಷ ನಿಗಾ ವಹಿಸಲಿದ್ದು, ಯಾವುದೇ ಅಹಿತಕರ ಘಟನೆಗಳಾದರೂ ಈ ಪಡೆಯ ಸದಸ್ಯರು ತುರ್ತಾಗಿ ಹಾಜರಾಗಲಿದ್ದಾರೆ. ಕೋಮು ಸೂಕ್ಷ್ಮ ಪ್ರದೇಶದಲ್ಲಿ ತಮ್ಮದೇ ಆದ ಗುಪ್ತಚರ ದಳವನ್ನೂ ಈ ಕಾರ್ಯಪಡೆ ಹೊಂದಿರುತ್ತದೆ. ಆಮೂಲಕ ಸಂಭಾವ್ಯ ಕೋಮು ಹಿಂಸಾಚಾರ, ಗಲಭೆಯಂತಹ ಸಂಚುಗಳನ್ನು ಕಾರ್ಯಪಡೆ ವಿಫಲಗೊಳಿಸಲಿದೆ.
ಕೋಮು ದ್ವೇಷದ ವಿಚಾರದ ಮೇಲೆ ನಿಗಾ ವಹಿಸುವುದು, ಮೂಲಭೂತವಾದಿ ಚಟುವಟಿಕೆ ಬಗ್ಗೆ ನಿಗಾ ಇಡುವುದು, ಜಾಲತಾಣಗಳ ಮೇಲೆ ಸೂಕ್ಷ್ಮ ನಿಗಾ ಇಡುವ ಕೆಲಸವನ್ನೂ ಗುಪ್ತಚರರು ಮಾಡಲಿದ್ದಾರೆ.

*ಡಿಐಜಿ ದರ್ಜೆ:* ಡಿಐಜಿ ದರ್ಜೆಯ ಮುಖ್ಯಸ್ಥರ ಕೈಕೆಳಗೆ ಡಿವೈಎಸ್ಪಿ ಇರುತ್ತಾರೆ. ಸದ್ಯಕ್ಕೆ ಮಂಗಳೂರಿನಲ್ಲಿ ಈ ಹಿಂದೆ ಸುದೀರ್ಘ ಕಾಲ ಕೆಲಸ ಮಾಡಿ ಅನುಭವ ಹೊಂದಿರುವ ಕೆ.ಯು ಬೆಳ್ಳಿಯಪ್ಪ ಅವರನ್ನು ಕಾರ್ಯಪಡೆಯ ಡಿವೈಎಸ್ಪಿ ಹುದ್ದೆಗೆ ನಿಯೋಜನೆ ಮಾಡಲಾಗಿದೆ. ಅವರ ಕೈಕೆಳಗೆ ನಾಲ್ವರು ಇನ್ಸ್ ಪೆಕ್ಟರ್, 16 ಪಿಎಸ್‌ಐಗಳು ಇರುತ್ತಾರೆ. ಒಟ್ಟು 248 ಸಿಬ್ಬಂದಿಗಳು ಇರುತ್ತಾರೆ.
ನಕ್ಸಲ್ ನಿಗ್ರಹ ಪಡೆಯಲ್ಲಿದ್ದ ಇನ್ಸ್ ಪೆಕ್ಟರ್ ಸಹಿತ 248 ಸಿಬ್ಬಂದಿಯನ್ನು ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಆಗಿ ಹೊಸತಾಗಿ ಕಾರ್ಯಪಡೆ ರಚಿಸಲಾಗಿದೆ. ಮೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಯಾವುದೇ ಠಾಣೆ ವ್ಯಾಪ್ತಿಯಲ್ಲಿ ಕೋಮು ಆಧಾರಿತ ಗಲಾಟೆ, ಇನ್ನಿತರ ಬೆಳವಣಿಗೆಯಾದರೆ ಈ ಕಾರ್ಯಪಡೆ ನಿಯಂತ್ರಿಸಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು