1:33 PM Saturday4 - October 2025
ಬ್ರೇಕಿಂಗ್ ನ್ಯೂಸ್
Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ…

ಇತ್ತೀಚಿನ ಸುದ್ದಿ

Mangaluru | ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ ನಾಮಫಲಕ ಶಾಸಕ ವೇದವ್ಯಾಸ ಕಾಮತ್ ಅನಾವರಣ

31/03/2025, 14:26

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆರ್.ಟಿ.ಓ ಕಚೇರಿ ಬಳಿ “ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ” ಎಂಬ ನಾಮಫಲಕವನ್ನು ಹಲವು ಗಣ್ಯರ ಉಪಸ್ಥಿತಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅನಾವರಣಗೊಳಿಸಿದರು.
ನಂತರ ಮಾತನಾಡಿದ ಶಾಸಕರು ಮಂಗಳಾದೇವಿ ದೇವಸ್ಥಾನ ಎಂಬುದು ಈ ಊರಿಗೆ ಮಾತ್ರವಲ್ಲ, ಪರವೂರು ಸೇರಿದಂತೆ ನಾಡಿನ ಪ್ರಸಿದ್ಧ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲೊಂದಾಗಿದೆ. ಇಂತಹ ಪುಣ್ಯಕ್ಷೇತ್ರದ ಹೆಸರಿನಲ್ಲಿ ಇನ್ನು ಮುಂದೆ ಈ ರಸ್ತೆ ಕರೆಯಲ್ಪಡುವುದು ಹರ್ಷ ತಂದಿದೆ ಎಂದರು.

ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆಯಿಂದ, ಎ ಬಿ. ಶೆಟ್ಟಿ ವೃತ್ತದಿಂದ, ಮಂಕಿಸ್ಮಾಂಡ್ ಮುಖಾಂತರ ಮಂಗಳಾದೇವಿ ದೇವಸ್ಥಾನ ಶಮಿ ಕಟ್ಟೆಯಾಗಿ ಫಸ್ಟ್ ರೈಲ್ವೆ ಬ್ರಿಡ್ಜ್ ವರೆಗಿನ ರಸ್ತೆ ಇದಾಗಿದ್ದು “ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ” ಎಂದು ನಾಮಕರಣವಾಗಿದೆ.
ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ರಮೇಶ್ ಕಂಡೆಟ್ಟು, ಮಾಜಿ ಮೇಯರ್ ಗಳಾದ ಮನೋಜ್ ಕುಮಾರ್ ಕೋಡಿಕಲ್, ಸುಧೀರ್ ಶೆಟ್ಟಿ ಕಣ್ಣೂರು, ಪ್ರೇಮಾನಂದ ಶೆಟ್ಟಿ, ದಿವಾಕರ್ ಪಾಂಡೇಶ್ವರ, ಮಾಜಿ ಉಪ ಮೇಯರ್ ಭಾನುಮತಿ, ಶೈಲೇಶ್ ಶೆಟ್ಟಿ, ಭರತ್ ಕುಮಾರ್, ಲತೀಫ್ ಕಂದುಕ, ರೇವತಿ ಶ್ಯಾಮ್ ಸುಂದರ್ ಶೆಟ್ಟಿ, ನಿತಿನ್ ಕುಮಾರ್, ಭಾಸ್ಕರ ಚಂದ್ರ ಶೆಟ್ಟಿ ಸೇರಿದಂತೆ ಅನೇಕ ಪ್ರಮುಖರು, ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು