1:36 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

Mangaluru | ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ ನಾಮಫಲಕ ಶಾಸಕ ವೇದವ್ಯಾಸ ಕಾಮತ್ ಅನಾವರಣ

31/03/2025, 14:26

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆರ್.ಟಿ.ಓ ಕಚೇರಿ ಬಳಿ “ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ” ಎಂಬ ನಾಮಫಲಕವನ್ನು ಹಲವು ಗಣ್ಯರ ಉಪಸ್ಥಿತಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅನಾವರಣಗೊಳಿಸಿದರು.
ನಂತರ ಮಾತನಾಡಿದ ಶಾಸಕರು ಮಂಗಳಾದೇವಿ ದೇವಸ್ಥಾನ ಎಂಬುದು ಈ ಊರಿಗೆ ಮಾತ್ರವಲ್ಲ, ಪರವೂರು ಸೇರಿದಂತೆ ನಾಡಿನ ಪ್ರಸಿದ್ಧ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲೊಂದಾಗಿದೆ. ಇಂತಹ ಪುಣ್ಯಕ್ಷೇತ್ರದ ಹೆಸರಿನಲ್ಲಿ ಇನ್ನು ಮುಂದೆ ಈ ರಸ್ತೆ ಕರೆಯಲ್ಪಡುವುದು ಹರ್ಷ ತಂದಿದೆ ಎಂದರು.

ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆಯಿಂದ, ಎ ಬಿ. ಶೆಟ್ಟಿ ವೃತ್ತದಿಂದ, ಮಂಕಿಸ್ಮಾಂಡ್ ಮುಖಾಂತರ ಮಂಗಳಾದೇವಿ ದೇವಸ್ಥಾನ ಶಮಿ ಕಟ್ಟೆಯಾಗಿ ಫಸ್ಟ್ ರೈಲ್ವೆ ಬ್ರಿಡ್ಜ್ ವರೆಗಿನ ರಸ್ತೆ ಇದಾಗಿದ್ದು “ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ” ಎಂದು ನಾಮಕರಣವಾಗಿದೆ.
ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ರಮೇಶ್ ಕಂಡೆಟ್ಟು, ಮಾಜಿ ಮೇಯರ್ ಗಳಾದ ಮನೋಜ್ ಕುಮಾರ್ ಕೋಡಿಕಲ್, ಸುಧೀರ್ ಶೆಟ್ಟಿ ಕಣ್ಣೂರು, ಪ್ರೇಮಾನಂದ ಶೆಟ್ಟಿ, ದಿವಾಕರ್ ಪಾಂಡೇಶ್ವರ, ಮಾಜಿ ಉಪ ಮೇಯರ್ ಭಾನುಮತಿ, ಶೈಲೇಶ್ ಶೆಟ್ಟಿ, ಭರತ್ ಕುಮಾರ್, ಲತೀಫ್ ಕಂದುಕ, ರೇವತಿ ಶ್ಯಾಮ್ ಸುಂದರ್ ಶೆಟ್ಟಿ, ನಿತಿನ್ ಕುಮಾರ್, ಭಾಸ್ಕರ ಚಂದ್ರ ಶೆಟ್ಟಿ ಸೇರಿದಂತೆ ಅನೇಕ ಪ್ರಮುಖರು, ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು