9:03 AM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

Mangaluru | ಪ್ರಧಾನಿಗೆ ರಾಜ್ಯ ಸರಕಾರದಿಂದ ಮನವಿ ಸಲ್ಲಿಕೆ: ಬರಮಾಡಿಕೊಂಡು ಬೇಡಿಕೆ ಮುಂದಿಟ್ಟ ಉಸ್ತುವಾರಿ ಸಚಿವ

28/11/2025, 15:50

ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುತ್ತಿದ್ದಂತೆ ರಾಜ್ಯ ಸರ್ಕಾರ ಮೋದಿಗೆ ಒಂದು ಮನವಿ ಸಲ್ಲಿಸಿದೆ.
ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿಯವರನ್ನು ಬರಮಾಡಿಕೊಂಡು ಸ್ವಾಗತಿಸಿದ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಈ ಮನವಿ ಸಲ್ಲಿಸಿದರು.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ರಾಜ್ಯದ ಮೆಕ್ಕೆಜೋಳ ಹಾಗೂ ಹೆಸರುಕಾಳು ಬೆಳೆಗಾರರು ಮಾರುಕಟ್ಟೆ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಸರ್ಕಾರವು ತಕ್ಷಣ ಮಧ್ಯಪ್ರವೇಶ ಮಾಡಿ ಕನಿಷ್ಠ ಬೆಂಬಲ ಬೆಲೆ, ಎಥೆನಾಲ್ ಹಂಚಿಕೆಯಲ್ಲಿನ ಸಮಸ್ಯೆಗಳನ್ನು ಸರಿಪಡಿಸಿ, ರೈತರಿಗೆ ದೊರೆಕಬೇಕಾದ ನ್ಯಾಯಯುತ ಬೆಲೆ ಸಿಗುವಂತೆ ಮಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದೆ.
ಇಂದು ಪ್ರಧಾನಿಗಳು ಉಡುಪಿಗೆ ಭೇಟಿ ನೀಡಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮೋದಿಯವರನ್ನು ರಾಜ್ಯಕ್ಕೆ ಬರಮಾಡಿಕೊಂಡು, ನಮ್ಮ ಮನವಿ ಪತ್ರವನ್ನು ಅವರಿಗೆ ನೀಡಿದ್ದಾರೆ.

ಪ್ರಧಾನಿ ಮೋದಿ ಅವರು ತಕ್ಷಣ ರಾಜ್ಯದ ರೈತರ ಕಷ್ಟವನ್ನು ಅರ್ಥೈಸಿಕೊಂಡು, ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುತ್ತಾರೆ ಎಂದು ಭಾವಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು