3:33 PM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಮಂಗಳೂರು: ಸ್ಟೇಟ್ ಬ್ಯಾಂಕ್ ನಲ್ಲಿ ಸೇವಾ ಕೇಂದ್ರ ಕರ್ನಾಟಕ ಒನ್ ಉದ್ಘಾಟನೆ

13/02/2023, 19:29

ಮಂಗಳೂರು(reporterkarnataka.com): ನಗರದ ಸ್ಟೇಟ್ ಬ್ಯಾಂಕ್ ನಲ್ಲಿ ಪ್ರೀತೆಶ್ ಅವರ ನೇತೃತ್ವದ ಸರಕಾರದ ಸೇವಾ ಕೇಂದ್ರವಾದ ಕರ್ನಾಟಕ ಒನ್ ನ ಉದ್ಘಾಟನೆ ಕಾರ್ಯಕ್ರಮ ನಡೆಯಿತು.

ಇಸ್ಕಾನ್ ನ ಜಿಲ್ಲಾ ಕಾರ್ಯದರ್ಶಿ ಸನ್ನನಂದನ ದಾಸ್ ಅವರು ನೆರವೇರಿಸಿ ಪ್ರೀತೇಶ್ ರವರ ಸಮಾಜ ಮುಖಿ ಕಾರ್ಯವನ್ನು ಶ್ಲಾಘಿಸಿದರು ಹಾಗೂ ಈ ಸಂಸ್ಥೆಯ ಮುಖಾಂತರ ಇನ್ನಷ್ಟು ಸೇವೆಯನ್ನು ನೀಡುವ0ಂತೆ ಆಗಲಿ ಎಂದು ಹಾರೈಸಿದರು.


ಶಾಸಕ ವೇದವ್ಯಾಸ್ ಕಾಮತ್ ಅವರು ಶುಭ ಹಾರೈಸಿದರು. ವಿಧಾನ ಪರಿಷತ್ ನ ಮಾಜಿ ಸದಸ್ಯರಾದ ಐವನ್ ಡಿಸೋಜ ಅವರು ಮಾತನಾಡಿ ಒಳ್ಳೆಯ ಸೇವೆ ಜನರಿಗೆ ಸಿಗುವಂತಾಗಲಿ ಎಂದು ಹಾರೈಸಿದರು. ಮಂಗಳೂರು ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ನವೀನ್ ಡಿಸೊಜ ಅವರು ಮಾತನಾಡಿ, ಪ್ರೀತೆಶ್ ರವರು ಕರ್ನಾಟಕ ಒನ್ ಆರಂಭಿಸುವ ಮೊದಲಿನಿಂದಲೂ ಜನಸೇವೆ ಮಾಡುತ್ತಾ ಜನ ಸಾಮಾನ್ಯರಿಗೆ ಚಿರಪರಿಚಿತರಾಗಿರುವುದಾಗಿ ತಿಳಿಸಿ ಮಹಾನಗರ ಪಾಲಿಕೆಯ ಎಲ್ಲಾ ಸೇವೆಗಳು ಈ ಸೇವಾ ಕೇಂದ್ರ ದಲ್ಲಿ ದೊರೆಯಲಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯ ಬೇಕು ಎಂದು ಆಶಿಸಿದರು. ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೊಶಾದಿಕಾರಿ ಪದ್ಮರಾಜ್ ಆರ್. ಅವರು ತನ್ನ ಸಣ್ಣ ವಯಸ್ಸಿನಲ್ಲೇ ಸಮಾಜ ಸೇವೆಯಲ್ಲಿ ತೊಡಗಿಕೊಂದಿರುವ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿ ಯುವ ಜನರು ದಾರಿ ತಪ್ಪುವ ವಯಸಿನಲ್ಲೆ ಸಮಾಜ ಸೇವೆ ಯಲ್ಲಿ ತೊಡಗಿ ಯುವಕರಿಗೆ ಮಾದರಿ ವ್ಯಕ್ತಿಯಾಗಿರುವುದಾಗಿ ಹಾಗೂ ಇನ್ನಷ್ಟು ಸೇವೆ ಮಾಡಲು ದೇವರು ಸಹಕರಿಸಲಿ ಎಂದು ಹಾರೈಸಿದರು.
ವೇದಿಕೆ ಯಲ್ಲಿ ಶಂಶುದೀನ್ ಕುದ್ರೋಳಿ, ಇಜ಼್ಜಾ ಬಜಾಲ್, ಪ್ರಭಾಕರ್ ಮತ್ತು ಮಾಲತಿ ಉಪಸ್ಥಿತರಿದ್ದರು. ನ್ಯಾಯವಾದಿ ರಘುನಾಥ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು