5:23 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಮಂಗಳೂರು: ಸ್ಟೇಟ್ ಬ್ಯಾಂಕ್ ನಲ್ಲಿ ಸೇವಾ ಕೇಂದ್ರ ಕರ್ನಾಟಕ ಒನ್ ಉದ್ಘಾಟನೆ

13/02/2023, 19:29

ಮಂಗಳೂರು(reporterkarnataka.com): ನಗರದ ಸ್ಟೇಟ್ ಬ್ಯಾಂಕ್ ನಲ್ಲಿ ಪ್ರೀತೆಶ್ ಅವರ ನೇತೃತ್ವದ ಸರಕಾರದ ಸೇವಾ ಕೇಂದ್ರವಾದ ಕರ್ನಾಟಕ ಒನ್ ನ ಉದ್ಘಾಟನೆ ಕಾರ್ಯಕ್ರಮ ನಡೆಯಿತು.

ಇಸ್ಕಾನ್ ನ ಜಿಲ್ಲಾ ಕಾರ್ಯದರ್ಶಿ ಸನ್ನನಂದನ ದಾಸ್ ಅವರು ನೆರವೇರಿಸಿ ಪ್ರೀತೇಶ್ ರವರ ಸಮಾಜ ಮುಖಿ ಕಾರ್ಯವನ್ನು ಶ್ಲಾಘಿಸಿದರು ಹಾಗೂ ಈ ಸಂಸ್ಥೆಯ ಮುಖಾಂತರ ಇನ್ನಷ್ಟು ಸೇವೆಯನ್ನು ನೀಡುವ0ಂತೆ ಆಗಲಿ ಎಂದು ಹಾರೈಸಿದರು.


ಶಾಸಕ ವೇದವ್ಯಾಸ್ ಕಾಮತ್ ಅವರು ಶುಭ ಹಾರೈಸಿದರು. ವಿಧಾನ ಪರಿಷತ್ ನ ಮಾಜಿ ಸದಸ್ಯರಾದ ಐವನ್ ಡಿಸೋಜ ಅವರು ಮಾತನಾಡಿ ಒಳ್ಳೆಯ ಸೇವೆ ಜನರಿಗೆ ಸಿಗುವಂತಾಗಲಿ ಎಂದು ಹಾರೈಸಿದರು. ಮಂಗಳೂರು ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ನವೀನ್ ಡಿಸೊಜ ಅವರು ಮಾತನಾಡಿ, ಪ್ರೀತೆಶ್ ರವರು ಕರ್ನಾಟಕ ಒನ್ ಆರಂಭಿಸುವ ಮೊದಲಿನಿಂದಲೂ ಜನಸೇವೆ ಮಾಡುತ್ತಾ ಜನ ಸಾಮಾನ್ಯರಿಗೆ ಚಿರಪರಿಚಿತರಾಗಿರುವುದಾಗಿ ತಿಳಿಸಿ ಮಹಾನಗರ ಪಾಲಿಕೆಯ ಎಲ್ಲಾ ಸೇವೆಗಳು ಈ ಸೇವಾ ಕೇಂದ್ರ ದಲ್ಲಿ ದೊರೆಯಲಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯ ಬೇಕು ಎಂದು ಆಶಿಸಿದರು. ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೊಶಾದಿಕಾರಿ ಪದ್ಮರಾಜ್ ಆರ್. ಅವರು ತನ್ನ ಸಣ್ಣ ವಯಸ್ಸಿನಲ್ಲೇ ಸಮಾಜ ಸೇವೆಯಲ್ಲಿ ತೊಡಗಿಕೊಂದಿರುವ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿ ಯುವ ಜನರು ದಾರಿ ತಪ್ಪುವ ವಯಸಿನಲ್ಲೆ ಸಮಾಜ ಸೇವೆ ಯಲ್ಲಿ ತೊಡಗಿ ಯುವಕರಿಗೆ ಮಾದರಿ ವ್ಯಕ್ತಿಯಾಗಿರುವುದಾಗಿ ಹಾಗೂ ಇನ್ನಷ್ಟು ಸೇವೆ ಮಾಡಲು ದೇವರು ಸಹಕರಿಸಲಿ ಎಂದು ಹಾರೈಸಿದರು.
ವೇದಿಕೆ ಯಲ್ಲಿ ಶಂಶುದೀನ್ ಕುದ್ರೋಳಿ, ಇಜ಼್ಜಾ ಬಜಾಲ್, ಪ್ರಭಾಕರ್ ಮತ್ತು ಮಾಲತಿ ಉಪಸ್ಥಿತರಿದ್ದರು. ನ್ಯಾಯವಾದಿ ರಘುನಾಥ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು