7:01 AM Thursday17 - September 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ*

ಇತ್ತೀಚಿನ ಸುದ್ದಿ

ಮಂಗಳೂರು: ಸ್ಟೇಟ್ ಬ್ಯಾಂಕ್ ನಲ್ಲಿ ಸೇವಾ ಕೇಂದ್ರ ಕರ್ನಾಟಕ ಒನ್ ಉದ್ಘಾಟನೆ

13/02/2023, 19:29

ಮಂಗಳೂರು(reporterkarnataka.com): ನಗರದ ಸ್ಟೇಟ್ ಬ್ಯಾಂಕ್ ನಲ್ಲಿ ಪ್ರೀತೆಶ್ ಅವರ ನೇತೃತ್ವದ ಸರಕಾರದ ಸೇವಾ ಕೇಂದ್ರವಾದ ಕರ್ನಾಟಕ ಒನ್ ನ ಉದ್ಘಾಟನೆ ಕಾರ್ಯಕ್ರಮ ನಡೆಯಿತು.

ಇಸ್ಕಾನ್ ನ ಜಿಲ್ಲಾ ಕಾರ್ಯದರ್ಶಿ ಸನ್ನನಂದನ ದಾಸ್ ಅವರು ನೆರವೇರಿಸಿ ಪ್ರೀತೇಶ್ ರವರ ಸಮಾಜ ಮುಖಿ ಕಾರ್ಯವನ್ನು ಶ್ಲಾಘಿಸಿದರು ಹಾಗೂ ಈ ಸಂಸ್ಥೆಯ ಮುಖಾಂತರ ಇನ್ನಷ್ಟು ಸೇವೆಯನ್ನು ನೀಡುವ0ಂತೆ ಆಗಲಿ ಎಂದು ಹಾರೈಸಿದರು.


ಶಾಸಕ ವೇದವ್ಯಾಸ್ ಕಾಮತ್ ಅವರು ಶುಭ ಹಾರೈಸಿದರು. ವಿಧಾನ ಪರಿಷತ್ ನ ಮಾಜಿ ಸದಸ್ಯರಾದ ಐವನ್ ಡಿಸೋಜ ಅವರು ಮಾತನಾಡಿ ಒಳ್ಳೆಯ ಸೇವೆ ಜನರಿಗೆ ಸಿಗುವಂತಾಗಲಿ ಎಂದು ಹಾರೈಸಿದರು. ಮಂಗಳೂರು ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ನವೀನ್ ಡಿಸೊಜ ಅವರು ಮಾತನಾಡಿ, ಪ್ರೀತೆಶ್ ರವರು ಕರ್ನಾಟಕ ಒನ್ ಆರಂಭಿಸುವ ಮೊದಲಿನಿಂದಲೂ ಜನಸೇವೆ ಮಾಡುತ್ತಾ ಜನ ಸಾಮಾನ್ಯರಿಗೆ ಚಿರಪರಿಚಿತರಾಗಿರುವುದಾಗಿ ತಿಳಿಸಿ ಮಹಾನಗರ ಪಾಲಿಕೆಯ ಎಲ್ಲಾ ಸೇವೆಗಳು ಈ ಸೇವಾ ಕೇಂದ್ರ ದಲ್ಲಿ ದೊರೆಯಲಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯ ಬೇಕು ಎಂದು ಆಶಿಸಿದರು. ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೊಶಾದಿಕಾರಿ ಪದ್ಮರಾಜ್ ಆರ್. ಅವರು ತನ್ನ ಸಣ್ಣ ವಯಸ್ಸಿನಲ್ಲೇ ಸಮಾಜ ಸೇವೆಯಲ್ಲಿ ತೊಡಗಿಕೊಂದಿರುವ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿ ಯುವ ಜನರು ದಾರಿ ತಪ್ಪುವ ವಯಸಿನಲ್ಲೆ ಸಮಾಜ ಸೇವೆ ಯಲ್ಲಿ ತೊಡಗಿ ಯುವಕರಿಗೆ ಮಾದರಿ ವ್ಯಕ್ತಿಯಾಗಿರುವುದಾಗಿ ಹಾಗೂ ಇನ್ನಷ್ಟು ಸೇವೆ ಮಾಡಲು ದೇವರು ಸಹಕರಿಸಲಿ ಎಂದು ಹಾರೈಸಿದರು.
ವೇದಿಕೆ ಯಲ್ಲಿ ಶಂಶುದೀನ್ ಕುದ್ರೋಳಿ, ಇಜ಼್ಜಾ ಬಜಾಲ್, ಪ್ರಭಾಕರ್ ಮತ್ತು ಮಾಲತಿ ಉಪಸ್ಥಿತರಿದ್ದರು. ನ್ಯಾಯವಾದಿ ರಘುನಾಥ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು