7:41 AM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಮಂಗಳೂರು: ರಾಜ್ಯಮಟ್ಟದ ಒಂದು ದಿನದ “ದೀಕ್ಷಾ” ಪಿಎಸ್ ಟಿ ತರಬೇತಿ ಕಾರ್ಯಾಗಾರ

23/06/2024, 22:15

ಮಂಗಳೂರು(reporterkarnataka.com):ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಆತಿಥ್ಯದಲ್ಲಿ ಕರ್ನಾಟಕ ರಾಜ್ಯಮಟ್ಟದ ಒಂದು ದಿನದ “ದೀಕ್ಷಾ” ಪಿಎಸ್ ಟಿ ತರಬೇತಿ ಕಾರ್ಯಾಗಾರ ನಗರದ ಮಲ್ಲಿಕಟ್ಟೆ ಲಯನ್ಸ್ ಸೇವಾ ಭವನದಲ್ಲಿ ಭಾನುವಾರ ನಡೆಯಿತು.

ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ನ ರಾಷ್ಟೀಯ ಅಧ್ಯಕ್ಷ ಚಿತ್ರ ಕುಮಾರ್ , ಕರ್ನಾಟಕ ರಾಜ್ಯದ ವಿವಿಧ ಪ್ರಾದೇಶಿಕ ಘಟಕಗಳ ಪರಿಚಯ ಮತ್ತು ಸಾಧನೆ ಬಗ್ಗೆ ವಿವರಿಸಿದರು. ತರಬೇತಿಗೆ ಆಗಮಿಸಿದ ಪ್ರಾದೇಶಿಕ ಘಟಕಗಳ ಅಧ್ಯಕ್ಷರು, ಕಾರ್ಯದರ್ಶಿ, ಖಜಾಂಜಿ, ಘಟಕದ ಪದಾಧಿಕಾರಿಗಳು ಹಾಗೂ ಮಹಿಳಾ ಘಟಕದ ಸದಸ್ಯರುಗಳ ಜವಾಬ್ದಾರಿ ಮತ್ತು ಕರ್ತವ್ಯಗಳ ಬಗ್ಗೆ ತಿಳಿ ಹೇಳಿದರು . ಕರ್ನಾಟಕದ ಇನ್ನುಳಿದ ಪ್ರದೇಶಗಳಲ್ಲಿ ಹೊಸ ಘಟಕಗಳ ಆರಂಭ ಮತ್ತು ವಿಸ್ತರಣೆಯ ಕಾರ್ಯಯೋಜನೆ ಬಗ್ಗೆ ಗಮನ ಸೆಳೆದರು. ಮುಂದಿನ ದಿನಗಳಲ್ಲಿ ಆಂಧ್ರ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಪ್ರಾದೇಶಿಕ ಘಟಕಗಳ ವಿಸ್ತರಣೆ ಬಗ್ಗೆ ತಿಳಿಸಿದರು.
ಸಂಸ್ಥೆಯ ಕಾರ್ಯಕ್ರಮಗಳಲ್ಲಿ ಒಂದಾದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ವೇತನಕ್ಕೆ ಪಿಪಿಎಫ್ ದೇಣಿಗೆ ನೀಡಿದ ಘಟಕದ ಸದಸ್ಯರಿಗೆ ಗೌರವಂದನೆಯನ್ನು ಸಲ್ಲಿಸಿದರು.
ಸಂಸ್ಥೆಯ ಆಡಳಿತ ವಿಭಾಗ ರಾಷ್ಟ್ರೀಯ ನಿರ್ದೇಶಕ ನವೀನ್ ಅಮೀನ್ ಅಧ್ಯಕ್ಷತೆ ವಹಿಸಿದ್ದರು. ಪೂರ್ವ ರಾಷ್ಟ್ರೀಯ ಅಧ್ಯಕ್ಷರು ಮತ್ತು ಮುಖ್ಯ ತರಬೇತಿದಾರ ಡಾ. ಕೇದಿಗೆ ಅರವಿಂದ ರಾವ್, ಎಸ್ ಸಿ ಐ ರಾಷ್ಟ್ರೀಯ ಕಾನೂನು ಸಲಹೆಗಾರ ನಾಗೇಶ್, ರಾಷ್ಟ್ರೀಯ ಉಪಾಧ್ಯಕ್ಷರಾದ ಡಿ. ಕಿಶೋರ್ ಫರ್ನಾಂಡಿಸ್, ಬಿ. ಹುಸೇನ್ ಹೈಕಾಡಿ, ಪುಷ್ಪಾ ಶೆಟ್ಟಿ, ಡಾ. ಶಿವಕುಮಾರ್, ರಾಷ್ಟ್ರೀಯ ನಿರ್ದೇಶಕ ಓರಿಯಂಟೇಶನ್ ಕೆಪಿಎ ರೆಹಮಾನ್, ಮಂಗಳೂರು ಘಟಕ ನಿಕಟ ಪೂರ್ವ ಅಧ್ಯಕ್ಷ ಅಶೋಕ್ ಎಂಕೆ, ಮಂಗಳೂರು ಘಟಕ ಕಾರ್ಯದರ್ಶಿ ಸುನಂದ ಶಿವರಾಂ, ಪಿಎಸ್ ಟಿ ತರಬೇತಿ ಕಾರ್ಯಕ್ರಮದ ಕಾರ್ಯಕ್ರಮ ನಿರ್ದೇಶಕ ವಿಕಾಸ್ ಶೆಟ್ಟಿ ಉಪಸ್ಥಿತರಿದ್ದರು.
ಎಸ್ ಸಿಐ ಮಂಗಳೂರು ಘಟಕದ ಅಧ್ಯಕ್ಷ ದತ್ತಾತ್ರೇಯ ಬಾಳ ಸ್ವಾಗತಿಸಿದರು. ಅನಿಲ್ ಪಿಂಟೊ ಹಾಗೂ ಹರೀಶ್ ಎ. ಅತಿಥಿ ಪರಿಚಯ ಮಾಡಿದರು. ರಾಷ್ಟ್ರೀಯ ಖಜಾಂಜಿ ಜೋಸ್ ಖಂಡೋತ್ ವಂದಿಸಿದರು.
ಕಾರ್ಯಾಗಾರದಲ್ಲಿ ಕರ್ನಾಟಕ ರಾಜ್ಯದ 70 ಘಟಕಗಳಿಂದ 300 ಘಟಕಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು