2:42 PM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

Mangaluru | ಬೀದಿ ನಾಯಿಗಳ ಹಾವಳಿ: ವರದಿ ನೀಡಲು ಪಾಲಿಕೆ ಕಮಿಷನರ್ ಸೂಚನೆ

14/11/2025, 22:07

ಮಂಗಳೂರು(reporterkarnataka.com): ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ ಮುಂದಿನ 5 ದಿನಗಳೊಳಗಾಗಿ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ತಿಳಿಸಬೇಕು.
ತಮ್ಮ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಕ್ರಮ ವಹಿಸಬೇಕು. ನಗರ ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಬಂಧಿಸುವುದನ್ನು ಮೇಲ್ವಿಚಾರಣೆ ಮಾಡಲು ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಬೇಕು. ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಪುನ: ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಚವನ್ನು ತಮ್ಮ ಸಂಸ್ಥೆಯಿಂದಲೇ ವಸೂಲಿ ಮಾಡಲಾಗುತ್ತದೆ. ಸರ್ವೋಚ್ಚ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ತಮ್ಮ ವಿರುದ್ದ ಕಾನೂನು ಕ್ರಮ ವಹಿಸಲಾಗುತ್ತದೆ ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು