1:30 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

Mangaluru | ಕಡಲನಗರಿಯಲ್ಲಿ ಸ್ವರಾನುಬಂಧ ಸಂಗೀತ ಉತ್ಸವ; ಉಸ್ತಾದ್ ರಫೀಕ್ ಖಾನ್, ಪಂಡಿತ್ ರಾಜೇಂದ್ರ ನಾಕೋಡ್, ಪಂಡಿತ್ ಸಮೀರ್ ರಾವ್ ಗೆ ಸನ್ಮಾನ

11/01/2026, 18:05

ಮಂಗಳೂರು(reporterkarnataka.com): ಮಂಗಳೂರಿನ ಕಲಾ ಸಾಧನಾ ಸಂಸ್ಥೆ ವತಿಯಿಂದ ಸ್ವರಾನುಬಂಧ ಸಂಗೀತ ಉತ್ಸವ ಉದ್ಘಾಟನೆ ನಗರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಎಕ್ಸ್ಪರ್ಟ್ ಕಾಲೇಜು ಉಪಾಧ್ಯಕ್ಷೆ ಉಷಾಪ್ರಭಾ ನಾಯಕ್ ಮಾತನಾಡಿ, ಸಂಗೀತ ಕಲೆ ಯನ್ನು ಬೆಳೆಸಲು ಪ್ರತಿಯೊಬ್ಬರ ಸಹಕಾರ ಅಗತ್ಯವಿದೆ. ಸಂಗೀತಕ್ಕೂ ಸ್ವರಕ್ಕೂ ಅವಿನಾವಭಾವ ಸಂಬಂಧವಿದೆ ಎಂದು ಹೇಳಿದರು.
ಕಲಾವಿದರಿಗೆ ಸನ್ಮಾನ ನೆರವೇರಿಸಿ ಮಾತನಾಡಿದ ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಕಿಶೋರ್ ಆಳ್ವ ಮಾತನಾಡಿ, ಸಂಗೀತ ಆಲಿಸುವುದರ ಮೂಲಕ ಮಾನಸಿಕ ನೆಮ್ಮದಿ ಪಡೆಯಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಂ ಆರ್ ಪಿ ಎಲ್ ಕಂಪನಿ ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ, ಕಾರ್ಡೋಲೈಟ್ ಸ್ಪೆಷಲಿಟಿ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಜನರಲ್ ಮ್ಯಾನೇಜರ್ ದಿವಾಕರ್ ಕೆ., ಮಂಗಳೂರು ಸ್ಮಾರ್ಟ್ ಸಿಟಿ ಜನರಲ್ ಮ್ಯಾನೇಜರ್ ಅರುಣಾ ಪ್ರಭಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ. ಬಿ. ಹರೀಶ್ ರೈ, ಕಲಾ ಸಾಧನಾ ಸಂಸ್ಥೆ ನಿರ್ದೇಶಕಿ ವಿಭಾ ಶ್ರೀನಿವಾಸ್ ನಾಯಕ್, ಸಂಸ್ಥೆ ಗೌರವ ಸಲಹೆಗಾರ ಶ್ರೀನಿವಾಸ್ ನಾಯಕ್ ಇಂದಾಜೆ ಉಪಸ್ಥಿತರಿದ್ದರು. ಭಾಸ್ಕರ್ ರೈ ಕಟ್ಟಾ ಸ್ವಾಗತಿಸಿದರು. ಪುಷ್ಪರಾಜ್ ಬಿ. ಎನ್. ವಂದಿಸಿದರು. ಆಕಾಂಕ್ಷ ಶ್ರೀಶ ನಾಯಕ್ ವಂದಿಸಿದರು.
ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರಾದ ಉಸ್ತಾದ್ ರಫೀಕ್ ಖಾನ್, ಪಂಡಿತ್ ರಾಜೇಂದ್ರ ನಾಕೋಡ್ ಹಾಗೂ ಪಂಡಿತ್ ಸಮೀರ್ ರಾವ್ ಅವರನ್ನು ಸನ್ಮಾನಿಸಲಾಯಿತು. ಬಳಿಕ ನಡೆದ ಜುಗಲ್ ಬಂಧಿ ಕಾರ್ಯಕ್ರಮ ಜನಮನ ಸೂರೆಗೊಳಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು