2:37 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Mangaluru | ತಾಪಮಾನ ಹೆಚ್ಚಳ, ಭೂ ಕುಸಿತಕ್ಕೆ ಪರಿಸರದ ಮೇಲೆ ನಡೆಸಿರುವ ಅತಿಕ್ರಮಣ ಕಾರಣ: ಆರ್.ಕೆ. ನಾಯರ್

14/07/2025, 22:07

ಮಂಗಳೂರು(reporterkarnataka.com): ಭವಿಷ್ಯದ ಜೀವ ಜಗತ್ತಿನ ಸಂರಕ್ಷಣೆಯ ದೃಷ್ಟಿಯಿಂದ ನಮ್ಮ ಸುತ್ತಮುತ್ತಲಿನ ಪರಿಸರದ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಎಂದು ಗ್ರೀನ್ ಹೀರೋ ಆಫ್ ಇಂಡಿಯಾ ಖ್ಯಾತಿಯ ಆರ್.ಕೆ.ನಾಯರ್ ಹೇಳಿದ್ದಾರೆ.
ಅವರು ನಗರದ ರೋಶನಿ ನಿಲಯದ ಗ್ರಾಮೀಣಾಭಿವೃದ್ಧಿ ಅಧ್ಯಯನ ವಿಭಾಗದ ವತಿಯಿಂದ ಸೋಮವಾರ ಹಮ್ಮಿಕೊಂಡ ಪರಿಸರ ಜಾಗೃತಿ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.
ದೇಶದಲ್ಲಿ ಜೈವಿಕ ಕಾಡುಗಳ ನಾಶ,ಮರ ಗಿಡಗಳ ನಾಶವಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸರದ ಮೇಲೆ ಸಾಕಷ್ಟು ದುಷ್ಪರಿಣಾಮಗಳು ಉಂಟಾಗುತ್ತಿವೆ. ಇತ್ತೀಚಿನ ಕೊರೋನಾದಂತಹ ಸಾಂಕ್ರಾಮಿಕ ರೋಗ ಪ್ರಸರಣಕ್ಕೂ ಪರಿಸರದ ಮೇಲಾಗಿರುವ ಹಾನಿಯೂ ಒಂದು ಕಾರಣ. ಜಾಗತಿಕ ತಾಪಮಾನದ ಹೆಚ್ಚಳ ಅಲ್ಲಲ್ಲಿ ಉಂಟಾಗಿರುವ ಭೂ ಕುಸಿತ ಪರಿಸರದ ಮೇಲೆ ಮನುಷ್ಯ ನಡೆಸಿರುವ ಅತಿಕ್ರಮಣದ ಪರಿಣಾಮವಾಗಿದೆ. ಈ ಪರಿಸರ ಕೇವಲ ಮನುಷ್ಯರಿಗೆ ಮಾತ್ರ ಸೇರಿದ್ದಲ್ಲ ಆದುದರಿಂದ ಇಲ್ಲಿರುವ ಎಲ್ಲಾ ಜೀವ ರಾಶಿಗಳ ಸಂರಕ್ಷಣೆಗೆ ಪರಿಸರ ಸ್ನೇಹಿಯಾದ ನಮ್ಮ ಬದುಕು ನಾಳಿನ ಭವಿಷ್ಯಕ್ಕಾಗಿ
ಅಗತ್ಯವಿದೆ ಎಂದು ಆರ್.ಕೆ.ನಾಯರ್ ತಿಳಿಸಿದ್ದಾರೆ.
ಸಮಾರಂಭದಲ್ಲಿ ರೋಶನಿ ನಿಲಯ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲರಾದ ಡಾ.ಸೋಪಿಯಾ ಎನ್. ಫೆರ್ನಾಂಡೀಸ್, ಕಾಲೇಜಿನ ಗ್ರಾಮೀಣಾಭಿವೃದ್ಧಿ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಪ್ರಶಾಂತ್, ಐಕ್ಯೂ ಎಸಿ ಸಂಯೋಜಕಿ ಡಾ.ಸರಿತಾ ಡಿ ಸೋಜ, ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು