7:15 PM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

Mangaluru | ತಾಪಮಾನ ಹೆಚ್ಚಳ, ಭೂ ಕುಸಿತಕ್ಕೆ ಪರಿಸರದ ಮೇಲೆ ನಡೆಸಿರುವ ಅತಿಕ್ರಮಣ ಕಾರಣ: ಆರ್.ಕೆ. ನಾಯರ್

14/07/2025, 22:07

ಮಂಗಳೂರು(reporterkarnataka.com): ಭವಿಷ್ಯದ ಜೀವ ಜಗತ್ತಿನ ಸಂರಕ್ಷಣೆಯ ದೃಷ್ಟಿಯಿಂದ ನಮ್ಮ ಸುತ್ತಮುತ್ತಲಿನ ಪರಿಸರದ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಎಂದು ಗ್ರೀನ್ ಹೀರೋ ಆಫ್ ಇಂಡಿಯಾ ಖ್ಯಾತಿಯ ಆರ್.ಕೆ.ನಾಯರ್ ಹೇಳಿದ್ದಾರೆ.
ಅವರು ನಗರದ ರೋಶನಿ ನಿಲಯದ ಗ್ರಾಮೀಣಾಭಿವೃದ್ಧಿ ಅಧ್ಯಯನ ವಿಭಾಗದ ವತಿಯಿಂದ ಸೋಮವಾರ ಹಮ್ಮಿಕೊಂಡ ಪರಿಸರ ಜಾಗೃತಿ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.
ದೇಶದಲ್ಲಿ ಜೈವಿಕ ಕಾಡುಗಳ ನಾಶ,ಮರ ಗಿಡಗಳ ನಾಶವಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸರದ ಮೇಲೆ ಸಾಕಷ್ಟು ದುಷ್ಪರಿಣಾಮಗಳು ಉಂಟಾಗುತ್ತಿವೆ. ಇತ್ತೀಚಿನ ಕೊರೋನಾದಂತಹ ಸಾಂಕ್ರಾಮಿಕ ರೋಗ ಪ್ರಸರಣಕ್ಕೂ ಪರಿಸರದ ಮೇಲಾಗಿರುವ ಹಾನಿಯೂ ಒಂದು ಕಾರಣ. ಜಾಗತಿಕ ತಾಪಮಾನದ ಹೆಚ್ಚಳ ಅಲ್ಲಲ್ಲಿ ಉಂಟಾಗಿರುವ ಭೂ ಕುಸಿತ ಪರಿಸರದ ಮೇಲೆ ಮನುಷ್ಯ ನಡೆಸಿರುವ ಅತಿಕ್ರಮಣದ ಪರಿಣಾಮವಾಗಿದೆ. ಈ ಪರಿಸರ ಕೇವಲ ಮನುಷ್ಯರಿಗೆ ಮಾತ್ರ ಸೇರಿದ್ದಲ್ಲ ಆದುದರಿಂದ ಇಲ್ಲಿರುವ ಎಲ್ಲಾ ಜೀವ ರಾಶಿಗಳ ಸಂರಕ್ಷಣೆಗೆ ಪರಿಸರ ಸ್ನೇಹಿಯಾದ ನಮ್ಮ ಬದುಕು ನಾಳಿನ ಭವಿಷ್ಯಕ್ಕಾಗಿ
ಅಗತ್ಯವಿದೆ ಎಂದು ಆರ್.ಕೆ.ನಾಯರ್ ತಿಳಿಸಿದ್ದಾರೆ.
ಸಮಾರಂಭದಲ್ಲಿ ರೋಶನಿ ನಿಲಯ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲರಾದ ಡಾ.ಸೋಪಿಯಾ ಎನ್. ಫೆರ್ನಾಂಡೀಸ್, ಕಾಲೇಜಿನ ಗ್ರಾಮೀಣಾಭಿವೃದ್ಧಿ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಪ್ರಶಾಂತ್, ಐಕ್ಯೂ ಎಸಿ ಸಂಯೋಜಕಿ ಡಾ.ಸರಿತಾ ಡಿ ಸೋಜ, ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು