6:10 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

Mangaluru | ತಾಪಮಾನ ಹೆಚ್ಚಳ, ಭೂ ಕುಸಿತಕ್ಕೆ ಪರಿಸರದ ಮೇಲೆ ನಡೆಸಿರುವ ಅತಿಕ್ರಮಣ ಕಾರಣ: ಆರ್.ಕೆ. ನಾಯರ್

14/07/2025, 22:07

ಮಂಗಳೂರು(reporterkarnataka.com): ಭವಿಷ್ಯದ ಜೀವ ಜಗತ್ತಿನ ಸಂರಕ್ಷಣೆಯ ದೃಷ್ಟಿಯಿಂದ ನಮ್ಮ ಸುತ್ತಮುತ್ತಲಿನ ಪರಿಸರದ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಎಂದು ಗ್ರೀನ್ ಹೀರೋ ಆಫ್ ಇಂಡಿಯಾ ಖ್ಯಾತಿಯ ಆರ್.ಕೆ.ನಾಯರ್ ಹೇಳಿದ್ದಾರೆ.
ಅವರು ನಗರದ ರೋಶನಿ ನಿಲಯದ ಗ್ರಾಮೀಣಾಭಿವೃದ್ಧಿ ಅಧ್ಯಯನ ವಿಭಾಗದ ವತಿಯಿಂದ ಸೋಮವಾರ ಹಮ್ಮಿಕೊಂಡ ಪರಿಸರ ಜಾಗೃತಿ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.
ದೇಶದಲ್ಲಿ ಜೈವಿಕ ಕಾಡುಗಳ ನಾಶ,ಮರ ಗಿಡಗಳ ನಾಶವಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸರದ ಮೇಲೆ ಸಾಕಷ್ಟು ದುಷ್ಪರಿಣಾಮಗಳು ಉಂಟಾಗುತ್ತಿವೆ. ಇತ್ತೀಚಿನ ಕೊರೋನಾದಂತಹ ಸಾಂಕ್ರಾಮಿಕ ರೋಗ ಪ್ರಸರಣಕ್ಕೂ ಪರಿಸರದ ಮೇಲಾಗಿರುವ ಹಾನಿಯೂ ಒಂದು ಕಾರಣ. ಜಾಗತಿಕ ತಾಪಮಾನದ ಹೆಚ್ಚಳ ಅಲ್ಲಲ್ಲಿ ಉಂಟಾಗಿರುವ ಭೂ ಕುಸಿತ ಪರಿಸರದ ಮೇಲೆ ಮನುಷ್ಯ ನಡೆಸಿರುವ ಅತಿಕ್ರಮಣದ ಪರಿಣಾಮವಾಗಿದೆ. ಈ ಪರಿಸರ ಕೇವಲ ಮನುಷ್ಯರಿಗೆ ಮಾತ್ರ ಸೇರಿದ್ದಲ್ಲ ಆದುದರಿಂದ ಇಲ್ಲಿರುವ ಎಲ್ಲಾ ಜೀವ ರಾಶಿಗಳ ಸಂರಕ್ಷಣೆಗೆ ಪರಿಸರ ಸ್ನೇಹಿಯಾದ ನಮ್ಮ ಬದುಕು ನಾಳಿನ ಭವಿಷ್ಯಕ್ಕಾಗಿ
ಅಗತ್ಯವಿದೆ ಎಂದು ಆರ್.ಕೆ.ನಾಯರ್ ತಿಳಿಸಿದ್ದಾರೆ.
ಸಮಾರಂಭದಲ್ಲಿ ರೋಶನಿ ನಿಲಯ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲರಾದ ಡಾ.ಸೋಪಿಯಾ ಎನ್. ಫೆರ್ನಾಂಡೀಸ್, ಕಾಲೇಜಿನ ಗ್ರಾಮೀಣಾಭಿವೃದ್ಧಿ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಪ್ರಶಾಂತ್, ಐಕ್ಯೂ ಎಸಿ ಸಂಯೋಜಕಿ ಡಾ.ಸರಿತಾ ಡಿ ಸೋಜ, ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು