5:12 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

07/02/2026, 19:26

ಮಂಗಳೂರು(reporterkarnataka.com): ಮೆಟ್ರೋ ದರ ಬಗ್ಗೆ ತೀರ್ಮಾನ ಮಾಡಲು ಪ್ರತ್ಯೇಕ ಸಮಿತಿ ಇದೆ. ಕೇಂದ್ರ ಸರ್ಕಾರದ ಕಾರ್ಯದರ್ಶಿ ಇದರ ಮುಖ್ಯಸ್ಥರು. ಮೆಟ್ರೋ ದರ ಏರಿಕೆ ವಿಚಾರವಾಗಿ ನಮ್ಮ ಅಭಿಪ್ರಾಯವನ್ನು ಕೇಳಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಮಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.
ನಾನು ಬೆಂಗಳೂರಿಗೆ ಮರಳಿದ ಬಳಿಕ ಈ ಬಗ್ಗೆ ಚರ್ಚೆ ಮಾಡುವೆ. ಜನರಿಗೆ ತೊಂದರೆ ನೀಡಲು ನಮಗೆ ಇಷ್ಟವಿಲ್ಲ. ಆರ್ಥಿಕ ಸ್ಥಿತಿಗತಿ ಪರಿಶೀಲನೆ ಮಾಡುತ್ತೇನೆ ಎಂದರು.

*ಪಕ್ಷ ಏನು ಹೇಳುತ್ತದೆ ಅದನ್ನು ಕೇಳಬೇಕು:*
ನೀವು ಸಿಎಂ ಆಗಬೇಕು ಎಂಬ ಕನಸು ಜನರಿಗಿದೆ ಎಂದು ಕೇಳಿದಾಗ, “ಕನಸು ಜನರಿಗೂ ಇದೆ, ಶಾಸಕರಿಗೂ ಇದೆ, ನಿಮಗೂ (ಮಾಧ್ಯಮ) ಇದೆ. ಪಕ್ಷ ಏನು ಹೇಳುತ್ತದೆ ಅದನ್ನು ಕೇಳಬೇಕು” ಎಂದು ತಿಳಿಸಿದರು.
ದಲಿತ ಸಂಘಟನೆಗಳು ಪರಮೇಶ್ವರ್ ಅವರು ಸಿಎಂ ಆಗಬೇಕು ಎಂದು ಆಸೆ ಪಟ್ಟಿರುವ ಬಗ್ಗೆ ಕೇಳಿದಾಗ, “ಅವರವರ ಅಭಿಮಾನಿಗಳು ಆಸೆ ಪಡುತ್ತಾರೆ. ಅದನ್ನು ನಾನು ಬೇಡ ಎಂದು ಹೇಳಲು ಆಗುವುದಿಲ್ಲ” ಎಂದರು.

*ಸಮಯವೇ ಉತ್ತರ ನೀಡುತ್ತದೆ:*
ರಾಜ್ಯ ಬಜೆಟ್ ಬಳಿಕ ಅಧಿಕಾರ ಹಂಚಿಕೆ ಆಗುವುದೇ ಎಂದು ಕೇಳಿದಾಗ, “ಸಮಯವೇ ಉತ್ತರ ನೀಡಲಿದೆ” ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು