8:28 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮಂಗಳೂರು | ಯುವಕನ ಆತ್ಮಹತ್ಯೆ ಕೇಸ್​​ಗೆ ಟ್ವಿಸ್ಟ್​​: ಪ್ರೀತಿಸಿದ ಯುವತಿಯ ಕಿರುಕುಳದಿಂದ ನೊಂದು ಆತ್ಮಹತ್ಯೆ?; ಕೇಸು ದಾಖಲು

15/04/2026, 18:10

ಮಂಗಳೂರು(reporterkarnataka.com): ಮೂಡುಶೆಡ್ಡೆಯ ಎದುರುಪದವು ನಿವಾಸಿ ಮಹಮ್ಮದ್ ಆಶಿಕ್(22) ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್​ಟ್​ ಸಿಕ್ಕಿದೆ. ಪ್ರೀತಿಸಿದ ಯುವತಿಯ ಕಿರುಕುಳವೇ ಸಾವಿಗೆ ಕಾರಣ ಎನ್ನಲಾಗಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಯುವತಿ ಮತ್ತು ಆಕೆಯ ತಾಯಿ ಸೇರಿದಂತೆ ಮೂವರ ವಿರುದ್ಧ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾರ್ಚ್ 21ರಂದು ಈದ್ ಹಬ್ಬದ ದಿನವೇ ಆಶಿಕ್​​ ಆತ್ಮಹತ್ಯೆ ಮಾಡಿಕೊಂಡಿದ್ದರು. ಆರಂಭದಲ್ಲಿ ಯಾವುದೋ ಕಾರಣಕ್ಕೆ ಮನನೊಂದು ಆಶಿಕ್​​ ಈ ನಿರ್ಧಾರ ಕೈಗೊಂಡಿರಬಹುದು ಎಂದು ಭಾವಿಸಲಾಗಿತ್ತಾದರೂ, ಮೊಬೈಲ್​​ ಪರಿಶೀಲನೆ ವೇಳೆ ಪ್ರೇಮ‌ ಪ್ರಕರಣ ಬೆಳಕಿಗೆ ಬಂದಿದೆ. ಕಾಲೇಜು ಸಹಪಾಠಿಯಾಗಿದ್ದ ಉಳ್ಳಾಲ ಮೂಲದ ಯುವತಿಯನ್ನು ಆಶಿಕ್ ಪ್ರೀತಿಸುತ್ತಿದ್ದರು. ಸಾಲದ್ದಕ್ಕೆ ಇವರಿಬ್ಬರು ಕ್ಲೋಸ್​​ ಆಗಿರುವ ವಿಚಾರ ಬಗ್ಗೆ ಎರಡೂ ಕುಟುಂಬಕ್ಕೆ ಗೊತ್ತಿತ್ತು. ಈ ನಡುವೆ ಕೆಲ‌ ಸಮಯದಿಂದ ಆಶಿಕ್​​ನಿಂದ ಯುವತಿ ದೂರವಾಗತೊಡಗಿದ್ದಳು. ಹೀಗಾಗಿ ಸಾವಿಗೂ ಮುನ್ನ ನೀನು ನನಗೆ ಮೋಸ ಮಾಡುತ್ತಿದ್ದೀಯಾ ಎಂಬ ಬಗ್ಗೆ ಆಶಿಕ್​​ ಆಕೆಯನ್ನು ಕೇಳಿದ್ದು, ಈ ವೇಳೆ ನೀನು ಎಲ್ಲಿಯಾದರೂ ಸತ್ತು ಹೋಗು ಎಂದು ಯುವತಿ ಹೇಳಿದ್ದಳು ಎಂಬ ಆರೋಪವೀಗ ಕೇಳಿಬಂದಿದೆ. ಈ ಬಗ್ಗೆ ಸಾವಿಗೂ ಮುನ್ನ ನಡೆದಿರುವ ಮಾತುಕತೆಗಳು ವಾಟ್ಸ್ಯಾಪ್​​ ಚಾಟ್​​ನನಲ್ಲಿ ಬಹಿರಂಗವಾಗಿದೆ ಎನ್ನಲಾಗಿದ್ದು, ಸಾವಿಗೂ ಮುನ್ನ ವಿಡಿಯೋ ಕಾಲ್​​ನಲ್ಲಿ ಇಬ್ಬರು ಮಾತನಾಡಿದ್ದರು ಎಂಬುದೂ ಗೊತ್ತಾಗಿದೆ. ಆಶಿಕ್​​ ಜೊತೆ ಮಾತನಾಡುವ ವೇಳೆ ಅವಾಚ್ಯ ಶಬ್ದಗಳಿಂದ ಯುವತಿ ನಿಂದಿಸಿದ್ದು, ಇದರಿಂದ ಆಶಿಕ್​​ ಮಾನಸಿಕವಾಗಿ ನೊಂದು ಅದೇ ದಿನ ರಾತ್ರಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವತಿ ಪ್ರೀತಿಯ ನಾಟಕವಾಡಿ ಹಲವಾರು ಉಡುಗೊರೆ ಪಡೆದು ಖರ್ಚು ವೆಚ್ಚ ಮಾಡಿಸಿದ್ದಲ್ಲದೆ, ಮಾನಸಿಕವಾಗಿಯೂ ಆಶಿಕ್​​ಗೆ ಹಿಂಸೆ ನೀಡಿದ ಆರೋಪವೀಗ ಕೇಳಿಬಂದಿದೆ. ಹೀಗಾಗಿ ಯುವತಿ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಯುವಕನ ತಂದೆ ನೀಡಿದ್ದ ದೂರಿನ ಅನ್ವಯ ಕಾವೂರು ಠಾಣೆ ಪೊಲೀಸರು BNS 108, 352,351(3),3(5) ಸೆಕ್ಷನ್ ಅಡಿ ಪ್ರಕರಣ ದಾಖಲು ಮಾಡಿಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು