8:41 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ, ದಕ್ಷಿಣ, ಪುತ್ತೂರು ಕ್ಷೇತ್ರ: ಇನಾಯತ್ ಆಲಿ, ಲೋಬೊ, ಶಕುಂತಳಾ ಶೆಟ್ಟಿಗೆ ಕಾಂಗ್ರೆಸ್ ಟಿಕೆಟ್

08/04/2023, 09:44

ಬೆಂಗಳೂರು(reporterkarnataka.com): ಕರಾವಳಿಯಲ್ಲಿ ತೀವ್ರ ಕುತೂಹಲ ಮೂಡಿಸಿದ ಮಂಗಳೂರು ಉತ್ತರ, ಮಂಗಳೂರು ದಕ್ಷಿಣ ಹಾಗೂ ಪುತ್ತೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಖನ್ನು ಅಂತಿಮಗೊಳಿಸಲಾಗಿದೆ. ಉತ್ತರದಿಂದ ಇನಾಯತ್ ಆಲಿ, ದಕ್ಷಿಣದಿಂದ ಜೆ. ಆರ್. ಲೋಬೋ ಹಾಗೂ ಪುತ್ತೂರಿನಿಂದ ಶಕುಂತಳಾ ಶೆಟ್ಟಿ ಹೆಸರು ಅಂತಿಮ ಗೊಳಿಸಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಮಂಗಳೂರು ದಕ್ಷಿಣ ಹಾಗೂ ಪುತ್ತೂರಿಗೆ ಹಳೆ ಮುಖಗಳಾದ ಮಾಜಿ ಶಾಸಕರಾದ ಜೆ.ಆರ್. ಲೋಬೋ ಹಾಗೂ ಶಕುಂತಳಾ ಶೆಟ್ಟಿ ಅವರನ್ನು ಕಣಕ್ಕಿಳಿಸಲಾಗಿದೆ. ಆದರೆ ಮಂಗಳೂರು ಉತ್ತರಕ್ಕೆ ಹೊಸಮುಖಕ್ಜೆ ಮಣೆ ಹಾಕಲಾಗಿದೆ. ಇಲ್ಲಿ ಕೆಪಿಸಿಸಿ ಕಾರ್ಯದರ್ಶಿ ಇನಾಯತ್ ಆಲಿ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಮಂಗಳೂರು ಉತ್ತರ ಮತ್ತು ದಕ್ಷಿಣ ಕ್ಷೇತ್ರಕ್ಕೆ ಮಾಜಿ ಶಾಸಕರು, ಮಾಜಿ ಮೇಯರ್ ಗಳು, ಕಾರ್ಪೋರೇಟರ್ ಸೇರಿದಂತೆ ಡಜನಿಗೂ ಅಧಿಕ ಮಂದಿ ಆಕಾಂಕ್ಷಿಗಳಿದ್ದರು. ಮಂಗಳೂರಿನ ಯುವ ನ್ಯಾಯವಾದಿ, ಸಾಮಾಜಿಕ ಧುರೀಣ ಪದ್ಮರಾಜ್ ಅವರು ಕೂಡ ಮಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದ ವಿಷಯ ಎತ್ತಿಕೊಂಡು ಅಲ್ಪ ಸಂಖ್ಯಾತ ಕ್ರೈಸ್ತ ಸಮುದಾಯದ ಜೆ. ಆರ್. ಲೋಬೊ ಅವರಿಗೆ ಮತ್ತೆ ಟಿಕೆಟ್ ನೀಡಿದೆ. ಹಾಗೆ ಪುತ್ತೂರು ಕ್ಷೇತ್ರವನ್ನು ಮಹಿಳೆಯರಿಗೆ ಬಿಟ್ಟು ಕೊಟ್ಟಿದೆ. ಇಲ್ಲಿ ಶಕುಂತಳಾ ಶೆಟ್ಟಿ ಅವರಿಗೆ ಮತ್ತೆ ಅವಕಾಶ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು