10:43 PM Tuesday17 - February 2026
ಬ್ರೇಕಿಂಗ್ ನ್ಯೂಸ್
ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ: ಕೈ ಟಿಕೆಟ್ ಗಾಗಿ ಕಾಂಗ್ರೆಸ್ ನಲ್ಲೇ ಬಿಗ್ ಫೈಟ್!; ಹಳೆ ಮುಖವೋ? ಹೊಸ ಮುಖವೋ?

21/12/2022, 08:29

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯ ಕಾವು ನಿಧಾನವಾಗಿ ಏರಲಾರಂಭಿಸಿದೆ. ಇದರ ಪ್ರಭಾವ ಕರಾವಳಿ ಜಿಲ್ಲೆಯ ಮೇಲೂ ಬೀಳಲಾರಂಭಿದೆ. ಟಿಕೆಟ್ ಗಾಗಿ ಗುದ್ದಾಟ, ಪರದಾಟ ಆರಂಭವಾಗಿದೆ. ರಾಜ್ಯದ ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ನಲ್ಲಿ ಟಿಕೆಟ್ ವಾರ್ ಜೋರಾಗಿಯೇ ನಡೆಯುತ್ತಿದೆ. ಮಂಗಳೂರು ಉತ್ತರ ಕ್ಷೇತ್ರವೂ ಇದಕ್ಕೆ ಹೊರತಾಗಿಲ್ಲ.

ಮಂಗಳೂರು ಉತ್ತರದಲ್ಲಿ ಮಾಜಿ ಶಾಸಕ ಮೊಯ್ದೀನ್ ಬಾವಾ ಹಾಗೂ ಉದ್ಯಮಿ ಇನಾಯತ್ ಆಲಿ ನಡುವೆ ಟಿಕೆಟ್ ಗಾಗಿ ಭಾರಿ ಸ್ಪರ್ಧೆ ಏರ್ಪಟ್ಟಿದೆ. ಇಬ್ಬರೂ ಕೂಡ ಒಂದು ರೀತಿಯಲ್ಲಿ ಚುನಾವಣಾ ಪ್ರಚಾರ ಆರಂಭಿಸಿಯೇ ಬಿಟ್ಟಿದ್ದಾರೆ. ಇನಾಯತ್ ಆಲಿ ಅವರು ಒಂದು ವರ್ಷದ ಮುಂಚೆಯೇ ಚುನಾವಣೆಗೆ ಮಾನಸಿಕವಾಗಿ ಸಿದ್ದರಾಗಿದ್ದರು.

ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ 2 ಲಕ್ಷ ಡೆಪೊಸಿಟ್ ಇಟ್ಟು ಅರ್ಜಿ ಹಾಕುವ ಸಂಸ್ಕೃತಿಯನ್ನು ಪರಿಚಯಿಸಿರುವುದರಿಂದ ಮೊಯ್ದೀನ್ ಬಾವಾ ಹಾಗೂ ಇನಾಯತ್ ಆಲಿ ಇಬ್ಬರೂ ಅರ್ಜಿ ಹಾಕಿ ಟಿಕೆಟ್ ಗಾಗಿ ಚಾತಕಪಕ್ಷಿ ತರಹ ಕಾಯುತ್ತಿದ್ದಾರೆ. ಟಿಕೆಟ್ ಯಾರಿಗೂ ಸಿಕ್ಕಿದರೂ ಇನ್ನೊಂದು ಕಡೆಯವರು ಬಂಡಾಯ ಏಳುವಂತಹ ಸ್ಥಿತಿ ಇದೆ ಎಂದರೂ ತಪ್ಪಾಗಲಾರದು.

ಮಾಜಿ ಶಾಸಕ ಮೊಯ್ದೀನ್ ಬಾವಾ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲ ಇದೆ ಎನ್ನಲಾಗಿದೆ. ಅದೇ ರೀತಿ ಇನಾಯತ್ ಆಲಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಶೀರ್ವಾದ ಇದೆ ಎನ್ನಲಾಗಿದೆ. ಮೊಯ್ದೀನ್ ಬಾವಾ ಅವರಿಗೆ ಮತ್ತೊಂದು ಚಾನ್ಸ್ ನೀಡಿ ಮಂಗಳೂರು ಉತ್ತರದಲ್ಲಿ ಮುಸ್ಲಿಂ ನಾಯಕತ್ವವನ್ನು ಮತ್ತಷ್ಟು ಗಟ್ಟಿಗೊಳಿಸುವುದು ಸಿದ್ದರಾಮಯ್ಯ ಅವರ ಉದ್ದೇಶ ಎಂದು ಸಿದ್ದು ನಿಕಟವರ್ತಿಗಳು ಹೇಳುತ್ತಾರೆ‌. ಹಾಗೆ ಓಷನ್ ಕನ್ ಸ್ಟ್ರಕ್ಷನ್ ಸಂಸ್ಥೆಯ ಆಡಳಿತ ನಿರ್ದೇಶಕ ಇನಾಯತ್ ಅಲಿ ಅವರಿಗೆ ಅವಕಾಶ ನೀಡಿ ಮಂಗಳೂರು ಉತ್ತರದಲ್ಲಿ ಕಾಂಗ್ರೆಸ್ ಗೆಲ್ಲಿಸುವುದು ಡಿ.ಕೆ. ಶಿವಕುಮಾರ್ ಅವರ ಬಯಕೆ ಎನ್ನಲಾಗಿದೆ. ಯಾವುದಕ್ಕೂ ಸ್ವಲ್ಪ ಸಮಯ ಕಾದು ನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು