8:09 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ: ಕೈ ಟಿಕೆಟ್ ಗಾಗಿ ಕಾಂಗ್ರೆಸ್ ನಲ್ಲೇ ಬಿಗ್ ಫೈಟ್!; ಹಳೆ ಮುಖವೋ? ಹೊಸ ಮುಖವೋ?

21/12/2022, 08:29

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯ ಕಾವು ನಿಧಾನವಾಗಿ ಏರಲಾರಂಭಿಸಿದೆ. ಇದರ ಪ್ರಭಾವ ಕರಾವಳಿ ಜಿಲ್ಲೆಯ ಮೇಲೂ ಬೀಳಲಾರಂಭಿದೆ. ಟಿಕೆಟ್ ಗಾಗಿ ಗುದ್ದಾಟ, ಪರದಾಟ ಆರಂಭವಾಗಿದೆ. ರಾಜ್ಯದ ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ನಲ್ಲಿ ಟಿಕೆಟ್ ವಾರ್ ಜೋರಾಗಿಯೇ ನಡೆಯುತ್ತಿದೆ. ಮಂಗಳೂರು ಉತ್ತರ ಕ್ಷೇತ್ರವೂ ಇದಕ್ಕೆ ಹೊರತಾಗಿಲ್ಲ.

ಮಂಗಳೂರು ಉತ್ತರದಲ್ಲಿ ಮಾಜಿ ಶಾಸಕ ಮೊಯ್ದೀನ್ ಬಾವಾ ಹಾಗೂ ಉದ್ಯಮಿ ಇನಾಯತ್ ಆಲಿ ನಡುವೆ ಟಿಕೆಟ್ ಗಾಗಿ ಭಾರಿ ಸ್ಪರ್ಧೆ ಏರ್ಪಟ್ಟಿದೆ. ಇಬ್ಬರೂ ಕೂಡ ಒಂದು ರೀತಿಯಲ್ಲಿ ಚುನಾವಣಾ ಪ್ರಚಾರ ಆರಂಭಿಸಿಯೇ ಬಿಟ್ಟಿದ್ದಾರೆ. ಇನಾಯತ್ ಆಲಿ ಅವರು ಒಂದು ವರ್ಷದ ಮುಂಚೆಯೇ ಚುನಾವಣೆಗೆ ಮಾನಸಿಕವಾಗಿ ಸಿದ್ದರಾಗಿದ್ದರು.

ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ 2 ಲಕ್ಷ ಡೆಪೊಸಿಟ್ ಇಟ್ಟು ಅರ್ಜಿ ಹಾಕುವ ಸಂಸ್ಕೃತಿಯನ್ನು ಪರಿಚಯಿಸಿರುವುದರಿಂದ ಮೊಯ್ದೀನ್ ಬಾವಾ ಹಾಗೂ ಇನಾಯತ್ ಆಲಿ ಇಬ್ಬರೂ ಅರ್ಜಿ ಹಾಕಿ ಟಿಕೆಟ್ ಗಾಗಿ ಚಾತಕಪಕ್ಷಿ ತರಹ ಕಾಯುತ್ತಿದ್ದಾರೆ. ಟಿಕೆಟ್ ಯಾರಿಗೂ ಸಿಕ್ಕಿದರೂ ಇನ್ನೊಂದು ಕಡೆಯವರು ಬಂಡಾಯ ಏಳುವಂತಹ ಸ್ಥಿತಿ ಇದೆ ಎಂದರೂ ತಪ್ಪಾಗಲಾರದು.

ಮಾಜಿ ಶಾಸಕ ಮೊಯ್ದೀನ್ ಬಾವಾ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲ ಇದೆ ಎನ್ನಲಾಗಿದೆ. ಅದೇ ರೀತಿ ಇನಾಯತ್ ಆಲಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಶೀರ್ವಾದ ಇದೆ ಎನ್ನಲಾಗಿದೆ. ಮೊಯ್ದೀನ್ ಬಾವಾ ಅವರಿಗೆ ಮತ್ತೊಂದು ಚಾನ್ಸ್ ನೀಡಿ ಮಂಗಳೂರು ಉತ್ತರದಲ್ಲಿ ಮುಸ್ಲಿಂ ನಾಯಕತ್ವವನ್ನು ಮತ್ತಷ್ಟು ಗಟ್ಟಿಗೊಳಿಸುವುದು ಸಿದ್ದರಾಮಯ್ಯ ಅವರ ಉದ್ದೇಶ ಎಂದು ಸಿದ್ದು ನಿಕಟವರ್ತಿಗಳು ಹೇಳುತ್ತಾರೆ‌. ಹಾಗೆ ಓಷನ್ ಕನ್ ಸ್ಟ್ರಕ್ಷನ್ ಸಂಸ್ಥೆಯ ಆಡಳಿತ ನಿರ್ದೇಶಕ ಇನಾಯತ್ ಅಲಿ ಅವರಿಗೆ ಅವಕಾಶ ನೀಡಿ ಮಂಗಳೂರು ಉತ್ತರದಲ್ಲಿ ಕಾಂಗ್ರೆಸ್ ಗೆಲ್ಲಿಸುವುದು ಡಿ.ಕೆ. ಶಿವಕುಮಾರ್ ಅವರ ಬಯಕೆ ಎನ್ನಲಾಗಿದೆ. ಯಾವುದಕ್ಕೂ ಸ್ವಲ್ಪ ಸಮಯ ಕಾದು ನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು