1:48 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ: ಕೈ ಟಿಕೆಟ್ ಗಾಗಿ ಕಾಂಗ್ರೆಸ್ ನಲ್ಲೇ ಬಿಗ್ ಫೈಟ್!; ಹಳೆ ಮುಖವೋ? ಹೊಸ ಮುಖವೋ?

21/12/2022, 08:29

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯ ಕಾವು ನಿಧಾನವಾಗಿ ಏರಲಾರಂಭಿಸಿದೆ. ಇದರ ಪ್ರಭಾವ ಕರಾವಳಿ ಜಿಲ್ಲೆಯ ಮೇಲೂ ಬೀಳಲಾರಂಭಿದೆ. ಟಿಕೆಟ್ ಗಾಗಿ ಗುದ್ದಾಟ, ಪರದಾಟ ಆರಂಭವಾಗಿದೆ. ರಾಜ್ಯದ ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ನಲ್ಲಿ ಟಿಕೆಟ್ ವಾರ್ ಜೋರಾಗಿಯೇ ನಡೆಯುತ್ತಿದೆ. ಮಂಗಳೂರು ಉತ್ತರ ಕ್ಷೇತ್ರವೂ ಇದಕ್ಕೆ ಹೊರತಾಗಿಲ್ಲ.

ಮಂಗಳೂರು ಉತ್ತರದಲ್ಲಿ ಮಾಜಿ ಶಾಸಕ ಮೊಯ್ದೀನ್ ಬಾವಾ ಹಾಗೂ ಉದ್ಯಮಿ ಇನಾಯತ್ ಆಲಿ ನಡುವೆ ಟಿಕೆಟ್ ಗಾಗಿ ಭಾರಿ ಸ್ಪರ್ಧೆ ಏರ್ಪಟ್ಟಿದೆ. ಇಬ್ಬರೂ ಕೂಡ ಒಂದು ರೀತಿಯಲ್ಲಿ ಚುನಾವಣಾ ಪ್ರಚಾರ ಆರಂಭಿಸಿಯೇ ಬಿಟ್ಟಿದ್ದಾರೆ. ಇನಾಯತ್ ಆಲಿ ಅವರು ಒಂದು ವರ್ಷದ ಮುಂಚೆಯೇ ಚುನಾವಣೆಗೆ ಮಾನಸಿಕವಾಗಿ ಸಿದ್ದರಾಗಿದ್ದರು.

ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ 2 ಲಕ್ಷ ಡೆಪೊಸಿಟ್ ಇಟ್ಟು ಅರ್ಜಿ ಹಾಕುವ ಸಂಸ್ಕೃತಿಯನ್ನು ಪರಿಚಯಿಸಿರುವುದರಿಂದ ಮೊಯ್ದೀನ್ ಬಾವಾ ಹಾಗೂ ಇನಾಯತ್ ಆಲಿ ಇಬ್ಬರೂ ಅರ್ಜಿ ಹಾಕಿ ಟಿಕೆಟ್ ಗಾಗಿ ಚಾತಕಪಕ್ಷಿ ತರಹ ಕಾಯುತ್ತಿದ್ದಾರೆ. ಟಿಕೆಟ್ ಯಾರಿಗೂ ಸಿಕ್ಕಿದರೂ ಇನ್ನೊಂದು ಕಡೆಯವರು ಬಂಡಾಯ ಏಳುವಂತಹ ಸ್ಥಿತಿ ಇದೆ ಎಂದರೂ ತಪ್ಪಾಗಲಾರದು.

ಮಾಜಿ ಶಾಸಕ ಮೊಯ್ದೀನ್ ಬಾವಾ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲ ಇದೆ ಎನ್ನಲಾಗಿದೆ. ಅದೇ ರೀತಿ ಇನಾಯತ್ ಆಲಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಶೀರ್ವಾದ ಇದೆ ಎನ್ನಲಾಗಿದೆ. ಮೊಯ್ದೀನ್ ಬಾವಾ ಅವರಿಗೆ ಮತ್ತೊಂದು ಚಾನ್ಸ್ ನೀಡಿ ಮಂಗಳೂರು ಉತ್ತರದಲ್ಲಿ ಮುಸ್ಲಿಂ ನಾಯಕತ್ವವನ್ನು ಮತ್ತಷ್ಟು ಗಟ್ಟಿಗೊಳಿಸುವುದು ಸಿದ್ದರಾಮಯ್ಯ ಅವರ ಉದ್ದೇಶ ಎಂದು ಸಿದ್ದು ನಿಕಟವರ್ತಿಗಳು ಹೇಳುತ್ತಾರೆ‌. ಹಾಗೆ ಓಷನ್ ಕನ್ ಸ್ಟ್ರಕ್ಷನ್ ಸಂಸ್ಥೆಯ ಆಡಳಿತ ನಿರ್ದೇಶಕ ಇನಾಯತ್ ಅಲಿ ಅವರಿಗೆ ಅವಕಾಶ ನೀಡಿ ಮಂಗಳೂರು ಉತ್ತರದಲ್ಲಿ ಕಾಂಗ್ರೆಸ್ ಗೆಲ್ಲಿಸುವುದು ಡಿ.ಕೆ. ಶಿವಕುಮಾರ್ ಅವರ ಬಯಕೆ ಎನ್ನಲಾಗಿದೆ. ಯಾವುದಕ್ಕೂ ಸ್ವಲ್ಪ ಸಮಯ ಕಾದು ನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು