11:39 PM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ರಾಘವೇಂದ್ರ ಆರ್.ಕೋಟೆ ಅಧಿಕಾರ ಸ್ವೀಕಾರ

24/06/2021, 15:54

ಮಂಗಳೂರು(reporterkarnataka news): ಮಂಗಳೂರು ಉತ್ತರ ಪೊಲೀಸ್ ಠಾಣೆಯ ನೂತನ ಇನ್ಸ್ಪೆಕ್ಟರ್ ಆಗಿ ರಾಘವೇಂದ್ರ ಆರ್. ಕೋಟೆ ಅವರು ಅಧಿಕಾರ ಸ್ವೀಕರಿಸಿದರು.

ಉಡುಪಿ ಜಿಲ್ಲೆಯ  ಬೈಂದೂರು ತಾಲೂಕಿನ ಬಾಡದವರಾದ ಅವರು 1997ರಲ್ಲಿ ಪೊಲೀಸ್ ಇಲಾಖೆ ಗೆ ಸೇರ್ಪಡೆಗೊಂಡಿದ್ದರು. ನಂತರ ಮೂಲ್ಕಿ, ಉಡುಪಿ ನಗರ, ಶಂಕರನಾರಾಯಣ ಠಾಣಿಗಳಲ್ಲಿ ಕರ್ತವ್ಯ ನಿರ್ವಹಿಸಿ, 2007ರಲ್ಲಿ ರಾಜ್ಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇರ ನೇಮಕಾತಿ ಹೊಂದಿ ಬೆಂಗಳೂರಿನ ಯಶವಂತಪುರ,ಆನೆಕಲ್, ಮಾದನಾಯಕಹಳ್ಳಿ, ಸಿ.ಸಿ.ಬಿ.,ಹೆಬ್ಬಾಳ ಸಂಚಾರ, ಪಾಪಪಾಳ್ಯ ಠಾಣೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿದರು. 2020ರಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ ಹೊಂದಿ ಬೆಂಗಳೂರಿನ ಲೋಕಾಯುಕ್ತ ಎಸ್.ಐ.ಟಿ ವಿಂಗ್ ನಲ್ಲಿ ಕರ್ತವ್ಯದಲ್ಲಿದ್ದರು.

ಇವರು ಕರ್ತವ್ಯದ ಅವಧಿಯಲ್ಲಿ ತೋರಿದ ಸಾಧನೆ ಗೆ 2020-21ನೇ ಸಾಲಿನಲ್ಲಿ ಮುಖ್ಯಮಂತ್ರಿಯವರ ಪದಕ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು