12:14 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ರಾಘವೇಂದ್ರ ಆರ್.ಕೋಟೆ ಅಧಿಕಾರ ಸ್ವೀಕಾರ

24/06/2021, 15:54

ಮಂಗಳೂರು(reporterkarnataka news): ಮಂಗಳೂರು ಉತ್ತರ ಪೊಲೀಸ್ ಠಾಣೆಯ ನೂತನ ಇನ್ಸ್ಪೆಕ್ಟರ್ ಆಗಿ ರಾಘವೇಂದ್ರ ಆರ್. ಕೋಟೆ ಅವರು ಅಧಿಕಾರ ಸ್ವೀಕರಿಸಿದರು.

ಉಡುಪಿ ಜಿಲ್ಲೆಯ  ಬೈಂದೂರು ತಾಲೂಕಿನ ಬಾಡದವರಾದ ಅವರು 1997ರಲ್ಲಿ ಪೊಲೀಸ್ ಇಲಾಖೆ ಗೆ ಸೇರ್ಪಡೆಗೊಂಡಿದ್ದರು. ನಂತರ ಮೂಲ್ಕಿ, ಉಡುಪಿ ನಗರ, ಶಂಕರನಾರಾಯಣ ಠಾಣಿಗಳಲ್ಲಿ ಕರ್ತವ್ಯ ನಿರ್ವಹಿಸಿ, 2007ರಲ್ಲಿ ರಾಜ್ಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇರ ನೇಮಕಾತಿ ಹೊಂದಿ ಬೆಂಗಳೂರಿನ ಯಶವಂತಪುರ,ಆನೆಕಲ್, ಮಾದನಾಯಕಹಳ್ಳಿ, ಸಿ.ಸಿ.ಬಿ.,ಹೆಬ್ಬಾಳ ಸಂಚಾರ, ಪಾಪಪಾಳ್ಯ ಠಾಣೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿದರು. 2020ರಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ ಹೊಂದಿ ಬೆಂಗಳೂರಿನ ಲೋಕಾಯುಕ್ತ ಎಸ್.ಐ.ಟಿ ವಿಂಗ್ ನಲ್ಲಿ ಕರ್ತವ್ಯದಲ್ಲಿದ್ದರು.

ಇವರು ಕರ್ತವ್ಯದ ಅವಧಿಯಲ್ಲಿ ತೋರಿದ ಸಾಧನೆ ಗೆ 2020-21ನೇ ಸಾಲಿನಲ್ಲಿ ಮುಖ್ಯಮಂತ್ರಿಯವರ ಪದಕ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು