1:13 AM Friday9 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ ಸಂಚಾರಿ ಠಾಣೆ ನೂತನ ಕಟ್ಟಡ: ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

21/03/2023, 13:30

ಸುರತ್ಕಲ್(reporterkarnataka.com):
ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾದ ಮಂಗಳೂರು ಉತ್ತರ ಸಂಚಾರಿ ಠಾಣೆಯ ನೂತನ ಕಟ್ಟಡವನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ಉದ್ಘಾಟಿಸಿದರು.
ನೂತನ ಠಾಣೆ 2 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ವಿಶಾಲವಾದ ಪಾರ್ಕಿಂಗ್ , ಪೆರೆಡ್‍ಗೆ ಬೇಕಾದ ಸ್ಥಳಾವಕಾಶ, ವಿಶಾಲವಾದ ಕಟ್ಟಡವನ್ನು ಹೊಂದಿದೆ. ಪ್ರಸ್ತುತ ಬೈಕಂಪಾಡಿ ಎಪಿಎಂಸಿ ಯಾರ್ಡ್‍ನಲ್ಲಿರುವ ಈ ಠಾಣೆ ಶೀಘ್ರ ಸ್ಥಳಾಂತರಗೊಳ್ಳಲಿದೆ.
ಇದಕ್ಕೆ ಅನುದಾನ ಒದಗಿಸಿಕೊಡುವಲ್ಲಿ ಸಹಕರಿಸಿದ ಗೃಹಮಂತ್ರಿಗಳು, ಸಂಬಂಧಪಟ್ಟ ಇಲಾಖೆಯ ಪೊಲೀಸ್ ನಿರ್ದೇಶಕರು ಹಾಗೂ ಇತರ ಅಧಿಕಾರಿಗಳನ್ನು ಶಾಸಕರು ಸ್ಮರಿಸಿಕೊಂಡರಲ್ಲದೆ, ನೂತನ ಠಾಣೆಗೆ ಕಂಪ್ಯೂಟರ್ ಹಾಗೂ ಇತರ ಮೂಲಸೌಕರ್ಯದ ಅಗತ್ಯವಿದ್ದು ಉದ್ಯಮಿಗಳು ಸಹಕರಿಸುವಂತೆ ಮನವಿ ಮಾಡಿದರು.


ಪೊಲೀಸ್ ಆಯುಕ್ತ ಕುಲ್‍ದೀಪ್ ಆರ್. ಜೈನ್, ಕಾನೂನು ಸುವ್ಯವಸ್ಥೆ ಪೊಲೀಸ್ ಉಪ ಆಯುಕ್ತ ಅಂಶು ಕುಮಾರ್, ಅಪರಾಧಿಕ ಸಂಚಾರ ಪೊಲೀಸ್ ಉಪ ಆಯುಕ್ತ ಬಿ.ಪಿ. ದಿನೇಶ್ ಕುಮಾರ್, ಪೊಲೀಸ್ ವಸತಿ ವ್ಯವಸ್ಥಾಪಕಿ ಪ್ರಜ್ಞಾ ಆನಂದ್, ಸಂಚಾರ ಎಸಿಪಿ ಗೀತಾ ಕುಲಕರ್ಣಿ, ಉತ್ತರ ಸಂಚಾರಿ ಸಿಐ ಸುರೇಶ್ ಕುಮಾರ್, ಮನಪಾ ಸದಸ್ಯರು, ಉದ್ಯಮಿಗಳು, ವಿವಿಧ ಸಂಘ ಸಂಸ್ಥೆ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು