4:54 AM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ ಸಂಚಾರಿ ಠಾಣೆ ನೂತನ ಕಟ್ಟಡ: ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

21/03/2023, 13:30

ಸುರತ್ಕಲ್(reporterkarnataka.com):
ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾದ ಮಂಗಳೂರು ಉತ್ತರ ಸಂಚಾರಿ ಠಾಣೆಯ ನೂತನ ಕಟ್ಟಡವನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ಉದ್ಘಾಟಿಸಿದರು.
ನೂತನ ಠಾಣೆ 2 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ವಿಶಾಲವಾದ ಪಾರ್ಕಿಂಗ್ , ಪೆರೆಡ್‍ಗೆ ಬೇಕಾದ ಸ್ಥಳಾವಕಾಶ, ವಿಶಾಲವಾದ ಕಟ್ಟಡವನ್ನು ಹೊಂದಿದೆ. ಪ್ರಸ್ತುತ ಬೈಕಂಪಾಡಿ ಎಪಿಎಂಸಿ ಯಾರ್ಡ್‍ನಲ್ಲಿರುವ ಈ ಠಾಣೆ ಶೀಘ್ರ ಸ್ಥಳಾಂತರಗೊಳ್ಳಲಿದೆ.
ಇದಕ್ಕೆ ಅನುದಾನ ಒದಗಿಸಿಕೊಡುವಲ್ಲಿ ಸಹಕರಿಸಿದ ಗೃಹಮಂತ್ರಿಗಳು, ಸಂಬಂಧಪಟ್ಟ ಇಲಾಖೆಯ ಪೊಲೀಸ್ ನಿರ್ದೇಶಕರು ಹಾಗೂ ಇತರ ಅಧಿಕಾರಿಗಳನ್ನು ಶಾಸಕರು ಸ್ಮರಿಸಿಕೊಂಡರಲ್ಲದೆ, ನೂತನ ಠಾಣೆಗೆ ಕಂಪ್ಯೂಟರ್ ಹಾಗೂ ಇತರ ಮೂಲಸೌಕರ್ಯದ ಅಗತ್ಯವಿದ್ದು ಉದ್ಯಮಿಗಳು ಸಹಕರಿಸುವಂತೆ ಮನವಿ ಮಾಡಿದರು.


ಪೊಲೀಸ್ ಆಯುಕ್ತ ಕುಲ್‍ದೀಪ್ ಆರ್. ಜೈನ್, ಕಾನೂನು ಸುವ್ಯವಸ್ಥೆ ಪೊಲೀಸ್ ಉಪ ಆಯುಕ್ತ ಅಂಶು ಕುಮಾರ್, ಅಪರಾಧಿಕ ಸಂಚಾರ ಪೊಲೀಸ್ ಉಪ ಆಯುಕ್ತ ಬಿ.ಪಿ. ದಿನೇಶ್ ಕುಮಾರ್, ಪೊಲೀಸ್ ವಸತಿ ವ್ಯವಸ್ಥಾಪಕಿ ಪ್ರಜ್ಞಾ ಆನಂದ್, ಸಂಚಾರ ಎಸಿಪಿ ಗೀತಾ ಕುಲಕರ್ಣಿ, ಉತ್ತರ ಸಂಚಾರಿ ಸಿಐ ಸುರೇಶ್ ಕುಮಾರ್, ಮನಪಾ ಸದಸ್ಯರು, ಉದ್ಯಮಿಗಳು, ವಿವಿಧ ಸಂಘ ಸಂಸ್ಥೆ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು