12:36 AM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ ಕ್ಷೇತ್ರ: ರಾಜ್ಯ ಸರ💐ಕಾರದ ‘ನಮ್ಮ ಕ್ಲಿನಿಕ್’ ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

14/12/2022, 22:38

ಸುರತ್ಕಲ್(reporterkarnataka.com): ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು ಮೂರು ಕಡೆ ರಾಜ್ಯ ಸರಕಾರದ ನಮ್ಮ ಕ್ಲಿನಿಕ್” ಆರೋಗ್ಯ ಕೇಂದ್ರದ ಉದ್ಘಾಟನೆಯನ್ನು ಶಾಸಕ ಡಾ. ಭರತ್ ಶೆಟ್ಟಿ ವೈ. ನೆರವೇರಿಸಿದರು.

ಅವರು ಪಚ್ಚನಾಡಿಯಲ್ಲಿ ನೂತನ ನಮ್ಮ ಕ್ಲಿನಿಕ್ ಕೇಂದ್ರವನ್ನು
ಉದ್ಘಾಟಿಸಿ, ಮೀನಕಳಿಯ, ಮರಕಡ ಸಹಿತ ಮೂರು ಕಡೆ ನಮ್ಮ ಕ್ಲಿನಿಕ್ ಆರಂಭಿಸಲಾಗಿದೆ.

ಪಚ್ಚನಾಡಿ ಸುತ್ತಮುತ್ತಲಿನ ಜನರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕಾಗಿ ಶಕ್ತಿನಗರ ಇಲ್ಲವೇ ಬೊಂದೆಲ್ ಕೇಂದ್ರವನ್ನು ಅವಲಂಬಿಸಿದ್ದರು.
ಇದೀಗ ಈ ಸಮಸ್ಯೆ ತಪ್ಪಿದಂತಾಗಿದೆ.

ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಇಲ್ಲಿ ತಪಾಸಣೆ, ರಕ್ತ ತಪಾಸಣೆ, ದಂತ, ಕಣ್ಣು, ಮಹಿಳಾ ಸಂಬಂಧಿ ಸಮಸ್ಯೆಗಳಿಗೆ ಚಿಕಿತ್ಸೆ ದೊರೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ರಘು ಸಾಲ್ಯಾನ್, ಪಾಲಿಕೆ ಸದಸ್ಯೆ ಸಂಗೀತ ರವೀಂದ್ರ , ವೈದ್ಯಾಧಿಕಾರಿ ಡಾ. ರಾಜೇಶ್, ನಮ್ಮ ಕ್ಲಿನಿಕ್ ನ ನೂತನ ವೈದ್ಯಾಧಿಕಾರಿ ರಾಜೇಶ್ ಚಂದ್ರ ಬಿಎಸ್, ಡಾ.ಚಿರಾಗ್, ಡಾ. ಅಭಿಷೇಕ್, ಆರೋಗ್ಯ ಇಲಾಖೆಯ ಸುದರ್ಶನ್, ಬಿಜೆಪಿ ಪ್ರಮುಖರಾದ ಸಂದೀಪ್ ಪಚ್ಚನಾಡಿ ,ಪೂಜಾ ಪೈ, ಪ್ರಶಾಂತ್ ಪೈ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು