6:39 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ ಕ್ಷೇತ್ರ: ರಾಜ್ಯ ಸರ💐ಕಾರದ ‘ನಮ್ಮ ಕ್ಲಿನಿಕ್’ ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

14/12/2022, 22:38

ಸುರತ್ಕಲ್(reporterkarnataka.com): ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು ಮೂರು ಕಡೆ ರಾಜ್ಯ ಸರಕಾರದ ನಮ್ಮ ಕ್ಲಿನಿಕ್” ಆರೋಗ್ಯ ಕೇಂದ್ರದ ಉದ್ಘಾಟನೆಯನ್ನು ಶಾಸಕ ಡಾ. ಭರತ್ ಶೆಟ್ಟಿ ವೈ. ನೆರವೇರಿಸಿದರು.

ಅವರು ಪಚ್ಚನಾಡಿಯಲ್ಲಿ ನೂತನ ನಮ್ಮ ಕ್ಲಿನಿಕ್ ಕೇಂದ್ರವನ್ನು
ಉದ್ಘಾಟಿಸಿ, ಮೀನಕಳಿಯ, ಮರಕಡ ಸಹಿತ ಮೂರು ಕಡೆ ನಮ್ಮ ಕ್ಲಿನಿಕ್ ಆರಂಭಿಸಲಾಗಿದೆ.

ಪಚ್ಚನಾಡಿ ಸುತ್ತಮುತ್ತಲಿನ ಜನರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕಾಗಿ ಶಕ್ತಿನಗರ ಇಲ್ಲವೇ ಬೊಂದೆಲ್ ಕೇಂದ್ರವನ್ನು ಅವಲಂಬಿಸಿದ್ದರು.
ಇದೀಗ ಈ ಸಮಸ್ಯೆ ತಪ್ಪಿದಂತಾಗಿದೆ.

ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಇಲ್ಲಿ ತಪಾಸಣೆ, ರಕ್ತ ತಪಾಸಣೆ, ದಂತ, ಕಣ್ಣು, ಮಹಿಳಾ ಸಂಬಂಧಿ ಸಮಸ್ಯೆಗಳಿಗೆ ಚಿಕಿತ್ಸೆ ದೊರೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ರಘು ಸಾಲ್ಯಾನ್, ಪಾಲಿಕೆ ಸದಸ್ಯೆ ಸಂಗೀತ ರವೀಂದ್ರ , ವೈದ್ಯಾಧಿಕಾರಿ ಡಾ. ರಾಜೇಶ್, ನಮ್ಮ ಕ್ಲಿನಿಕ್ ನ ನೂತನ ವೈದ್ಯಾಧಿಕಾರಿ ರಾಜೇಶ್ ಚಂದ್ರ ಬಿಎಸ್, ಡಾ.ಚಿರಾಗ್, ಡಾ. ಅಭಿಷೇಕ್, ಆರೋಗ್ಯ ಇಲಾಖೆಯ ಸುದರ್ಶನ್, ಬಿಜೆಪಿ ಪ್ರಮುಖರಾದ ಸಂದೀಪ್ ಪಚ್ಚನಾಡಿ ,ಪೂಜಾ ಪೈ, ಪ್ರಶಾಂತ್ ಪೈ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು